7:58 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮೈಸೂರು ‘ಮುಡಾ’ ಹಗರಣದ ಸಿಬಿಐ ತನಿಖೆಗೆ ಒಪ್ಪಿಸಿ: ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

06/11/2024, 18:23

ಬೆಂಗಳೂರು(reporterkarnataka.com): ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮುಖ್ಯಮಂತ್ರಿಗಳದು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದರು.
ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ಹೊರಡುವ ಮುನ್ನ ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಮುಖ್ಯಮಂತ್ರಿಗಳಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಿಂದ ವಾಸ್ತವಿಕ ವಿಚಾರಗಳು ಹೊರಕ್ಕೆ ಬರಲು ಸಾಧ್ಯ ಎಂದು ನುಡಿದರು.
ಮುಖ್ಯಮಂತ್ರಿಗಳು ತಮ್ಮ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದಾರೆ. ಲೋಕಾಯುಕ್ತದ ಬದಲಾಗಿ ತಮ್ಮ ಕುಟುಂಬದ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಪ್ರಾಮಾಣಿಕತೆಯನ್ನು ತೋರಿಸಲಿ ಎಂದು ಒತ್ತಾಯಿಸಿದರು.
ಉಪ ಚುನಾವಣೆ ಸಂಬಂಧ ಪ್ರಶ್ನಿಸಿದಾಗ, 3ಕ್ಕೆ 3 ಕ್ಷೇತ್ರಗಳನ್ನು ಎನ್‍ಡಿಎ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಉತ್ತರ ಕೊಟ್ಟರು.
ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿಯ ಹಗರಣ ನಡೆದಿದ್ದು, ಆ ಸಚಿವರು ಮತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಅವರು ಒತ್ತಾಯಿಸಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಇಲಾಖೆಯಲ್ಲಿ ಅಧಿಕಾರಿ ಆತ್ಮಹತ್ಯೆ ಕುರಿತು ತನಿಖೆ ನಡೆದು ಸತ್ಯ ಹೊರಬರಲಿ; ಆಮೇಲೆ ಪ್ರತಿಕ್ರಿಯೆ ಕೊಡುವುದಾಗಿ ಹೇಳಿದರು.
ರಾಜ್ಯದೆಲ್ಲೆಡೆ ವಕ್ಫ್ ಒತ್ತುವರಿ ನಡೆದಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಬೇಕಿದೆ. ಅಲ್ಲದೇ, ಸಂಬಂಧಿತ ಸಚಿವ ರಾಜೀನಾಮೆ ಕೊಡಬೇಕು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು