7:13 PM Tuesday21 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಮೈಸೂರು ‘ಮುಡಾ’ ಹಗರಣದ ಸಿಬಿಐ ತನಿಖೆಗೆ ಒಪ್ಪಿಸಿ: ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

06/11/2024, 18:23

ಬೆಂಗಳೂರು(reporterkarnataka.com): ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮುಖ್ಯಮಂತ್ರಿಗಳದು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದರು.
ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ಹೊರಡುವ ಮುನ್ನ ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಮುಖ್ಯಮಂತ್ರಿಗಳಿಗೆ ನಿಜಕ್ಕೂ ಪ್ರಾಮಾಣಿಕತೆ ಇದ್ದರೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಿಂದ ವಾಸ್ತವಿಕ ವಿಚಾರಗಳು ಹೊರಕ್ಕೆ ಬರಲು ಸಾಧ್ಯ ಎಂದು ನುಡಿದರು.
ಮುಖ್ಯಮಂತ್ರಿಗಳು ತಮ್ಮ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದಾರೆ. ಲೋಕಾಯುಕ್ತದ ಬದಲಾಗಿ ತಮ್ಮ ಕುಟುಂಬದ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಪ್ರಾಮಾಣಿಕತೆಯನ್ನು ತೋರಿಸಲಿ ಎಂದು ಒತ್ತಾಯಿಸಿದರು.
ಉಪ ಚುನಾವಣೆ ಸಂಬಂಧ ಪ್ರಶ್ನಿಸಿದಾಗ, 3ಕ್ಕೆ 3 ಕ್ಷೇತ್ರಗಳನ್ನು ಎನ್‍ಡಿಎ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಉತ್ತರ ಕೊಟ್ಟರು.
ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿಯ ಹಗರಣ ನಡೆದಿದ್ದು, ಆ ಸಚಿವರು ಮತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಅವರು ಒತ್ತಾಯಿಸಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಇಲಾಖೆಯಲ್ಲಿ ಅಧಿಕಾರಿ ಆತ್ಮಹತ್ಯೆ ಕುರಿತು ತನಿಖೆ ನಡೆದು ಸತ್ಯ ಹೊರಬರಲಿ; ಆಮೇಲೆ ಪ್ರತಿಕ್ರಿಯೆ ಕೊಡುವುದಾಗಿ ಹೇಳಿದರು.
ರಾಜ್ಯದೆಲ್ಲೆಡೆ ವಕ್ಫ್ ಒತ್ತುವರಿ ನಡೆದಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಬೇಕಿದೆ. ಅಲ್ಲದೇ, ಸಂಬಂಧಿತ ಸಚಿವ ರಾಜೀನಾಮೆ ಕೊಡಬೇಕು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು