3:19 PM Monday11 - August 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ 3: ಕಡಲನಗರಿ ಮಂಗಳೂರಿನಲ್ಲಿ ಜನವರಿ 15ರಿಂದ ಆರಂಭ; ಮಕ್ಕಳಿಗಾಗಿ ವಿವಿಧ ವಿನೋದಾವಳಿ

06/11/2024, 19:10

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಬಹು ನಿರೀಕ್ಷಿತ ಮೂರನೇ ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾ 2025 ರ ಜನವರಿ 15ರಿಂದ 19 ರವರೆಗೆ 5 ದಿನಗಳ ಕಾಲ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ನಗರದ ವಿ.ಟಿ ರಸ್ತೆಯ ಚೇತನ ಶಿಶು ಅಭಿವೃದ್ಧಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಕಳೆದೆರಡು ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾವು ಯಶಸ್ವಿಯಾಗಿ ಸಾಗಿದ್ದು ಲಕ್ಷಾಂತರ ಜನರನ್ನು ಆಕರ್ಷಿಸಿ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಿತ್ತು. ಅದರಂತೆ ಈ ಬಾರಿಯೂ ಹಿಂದಿನ ಆವೃತ್ತಿಗಳಂತೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ, ಪಬ್ಬಾಸ್, ಮಣ್ಣಗುಡ್ಡ, ಕೆನರಾ ಹೈಸ್ಕೂಲ್ ಉರ್ವದ ಸುತ್ತಮುತ್ತ ಸಂಜೆ 4 ರಿಂದ ರಾತ್ರಿ 11ರ ವರೆಗೆ ಫುಡ್ ಫಿಯೆಸ್ಟಾ ಆಯೋಜಿಸಲಾಗಿದ್ದು, ಸಾರ್ವಜನಿಕರಿಗಾಗಿ ವಿವಿಧ ಮನೋರಂಜನಾ ಕಾರ್ಯಕ್ರಮಗಳೂ ನಡೆಯಲಿವೆ. ಬಹು ಬೇಡಿಕೆಯನುಸಾರ ಈ ಬಾರಿ ಸಸ್ಯಾಹಾರಿಗಳಿಗೆಂದೇ ಪ್ರತ್ಯೇಕ ವ್ಯವಸ್ಥೆಯನ್ನು ಸಹ ಮಾಡಲಾಗುವುದಾಗಿದ್ದು ಮಕ್ಕಳಿಗಾಗಿ ವಿಶೇಷ ವಿನೋದಾವಳಿಗಳನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.
ಪ್ರತಿಷ್ಠಾನದ ಮಾರ್ಗದರ್ಶಕರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಅತ್ಯಂತ ಯಶಸ್ವಿಯಾಗಿ ಸಮಾಪ್ತಿಗೊಂಡ ಕಳೆದೆರಡು ಬಾರಿಯ ಫುಡ್ ಫೆಸ್ಟ್ ನಿಂದ ಉತ್ತೇಜನಗೊಂಡು ಸುರತ್ಕಲ್, ಮೂಡಬಿದ್ರಿ ಸೇರಿದಂತೆ ಅನೇಕ ಕಡೆಗಳಲ್ಲಿ ಇದೇ ರೀತಿಯ ಕಾರ್ಯಕ್ರಮಗಳು ನಡೆದಿವೆ. ಇದು ಎಲ್ಲೆಡೆ ಆಹಾರ ಸಂಸ್ಕೃತಿಯ ವಿನಿಮಯಕ್ಕೆ ದಾರಿಯಾಗಲಿದ್ದು ಈ ಬಾರಿಯ ಸ್ಟ್ರೀಟ್ ಫುಡ್ ಫಿಯೆಸ್ಟ ಈ ಹಿಂದಿಗಿಂತಲೂ ಹೆಚ್ಚಿನ ಜನರನ್ನು ಆಕರ್ಷಿಸಿ ಯಶಸ್ವಿಯಾಗಲಿ ಎಂದು ಹಾರೈಸಿದರು.


ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ್, ನರೇಶ್ ಶೆಣೈ, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು