5:39 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ 3: ಕಡಲನಗರಿ ಮಂಗಳೂರಿನಲ್ಲಿ ಜನವರಿ 15ರಿಂದ ಆರಂಭ; ಮಕ್ಕಳಿಗಾಗಿ ವಿವಿಧ ವಿನೋದಾವಳಿ

06/11/2024, 19:10

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಬಹು ನಿರೀಕ್ಷಿತ ಮೂರನೇ ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾ 2025 ರ ಜನವರಿ 15ರಿಂದ 19 ರವರೆಗೆ 5 ದಿನಗಳ ಕಾಲ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ನಗರದ ವಿ.ಟಿ ರಸ್ತೆಯ ಚೇತನ ಶಿಶು ಅಭಿವೃದ್ಧಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಕಳೆದೆರಡು ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾವು ಯಶಸ್ವಿಯಾಗಿ ಸಾಗಿದ್ದು ಲಕ್ಷಾಂತರ ಜನರನ್ನು ಆಕರ್ಷಿಸಿ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಿತ್ತು. ಅದರಂತೆ ಈ ಬಾರಿಯೂ ಹಿಂದಿನ ಆವೃತ್ತಿಗಳಂತೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ, ಪಬ್ಬಾಸ್, ಮಣ್ಣಗುಡ್ಡ, ಕೆನರಾ ಹೈಸ್ಕೂಲ್ ಉರ್ವದ ಸುತ್ತಮುತ್ತ ಸಂಜೆ 4 ರಿಂದ ರಾತ್ರಿ 11ರ ವರೆಗೆ ಫುಡ್ ಫಿಯೆಸ್ಟಾ ಆಯೋಜಿಸಲಾಗಿದ್ದು, ಸಾರ್ವಜನಿಕರಿಗಾಗಿ ವಿವಿಧ ಮನೋರಂಜನಾ ಕಾರ್ಯಕ್ರಮಗಳೂ ನಡೆಯಲಿವೆ. ಬಹು ಬೇಡಿಕೆಯನುಸಾರ ಈ ಬಾರಿ ಸಸ್ಯಾಹಾರಿಗಳಿಗೆಂದೇ ಪ್ರತ್ಯೇಕ ವ್ಯವಸ್ಥೆಯನ್ನು ಸಹ ಮಾಡಲಾಗುವುದಾಗಿದ್ದು ಮಕ್ಕಳಿಗಾಗಿ ವಿಶೇಷ ವಿನೋದಾವಳಿಗಳನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.
ಪ್ರತಿಷ್ಠಾನದ ಮಾರ್ಗದರ್ಶಕರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಅತ್ಯಂತ ಯಶಸ್ವಿಯಾಗಿ ಸಮಾಪ್ತಿಗೊಂಡ ಕಳೆದೆರಡು ಬಾರಿಯ ಫುಡ್ ಫೆಸ್ಟ್ ನಿಂದ ಉತ್ತೇಜನಗೊಂಡು ಸುರತ್ಕಲ್, ಮೂಡಬಿದ್ರಿ ಸೇರಿದಂತೆ ಅನೇಕ ಕಡೆಗಳಲ್ಲಿ ಇದೇ ರೀತಿಯ ಕಾರ್ಯಕ್ರಮಗಳು ನಡೆದಿವೆ. ಇದು ಎಲ್ಲೆಡೆ ಆಹಾರ ಸಂಸ್ಕೃತಿಯ ವಿನಿಮಯಕ್ಕೆ ದಾರಿಯಾಗಲಿದ್ದು ಈ ಬಾರಿಯ ಸ್ಟ್ರೀಟ್ ಫುಡ್ ಫಿಯೆಸ್ಟ ಈ ಹಿಂದಿಗಿಂತಲೂ ಹೆಚ್ಚಿನ ಜನರನ್ನು ಆಕರ್ಷಿಸಿ ಯಶಸ್ವಿಯಾಗಲಿ ಎಂದು ಹಾರೈಸಿದರು.


ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ್, ನರೇಶ್ ಶೆಣೈ, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು