8:01 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ 3: ಕಡಲನಗರಿ ಮಂಗಳೂರಿನಲ್ಲಿ ಜನವರಿ 15ರಿಂದ ಆರಂಭ; ಮಕ್ಕಳಿಗಾಗಿ ವಿವಿಧ ವಿನೋದಾವಳಿ

06/11/2024, 19:10

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಬಹು ನಿರೀಕ್ಷಿತ ಮೂರನೇ ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾ 2025 ರ ಜನವರಿ 15ರಿಂದ 19 ರವರೆಗೆ 5 ದಿನಗಳ ಕಾಲ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ನಗರದ ವಿ.ಟಿ ರಸ್ತೆಯ ಚೇತನ ಶಿಶು ಅಭಿವೃದ್ಧಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಕಳೆದೆರಡು ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾವು ಯಶಸ್ವಿಯಾಗಿ ಸಾಗಿದ್ದು ಲಕ್ಷಾಂತರ ಜನರನ್ನು ಆಕರ್ಷಿಸಿ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಿತ್ತು. ಅದರಂತೆ ಈ ಬಾರಿಯೂ ಹಿಂದಿನ ಆವೃತ್ತಿಗಳಂತೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ, ಪಬ್ಬಾಸ್, ಮಣ್ಣಗುಡ್ಡ, ಕೆನರಾ ಹೈಸ್ಕೂಲ್ ಉರ್ವದ ಸುತ್ತಮುತ್ತ ಸಂಜೆ 4 ರಿಂದ ರಾತ್ರಿ 11ರ ವರೆಗೆ ಫುಡ್ ಫಿಯೆಸ್ಟಾ ಆಯೋಜಿಸಲಾಗಿದ್ದು, ಸಾರ್ವಜನಿಕರಿಗಾಗಿ ವಿವಿಧ ಮನೋರಂಜನಾ ಕಾರ್ಯಕ್ರಮಗಳೂ ನಡೆಯಲಿವೆ. ಬಹು ಬೇಡಿಕೆಯನುಸಾರ ಈ ಬಾರಿ ಸಸ್ಯಾಹಾರಿಗಳಿಗೆಂದೇ ಪ್ರತ್ಯೇಕ ವ್ಯವಸ್ಥೆಯನ್ನು ಸಹ ಮಾಡಲಾಗುವುದಾಗಿದ್ದು ಮಕ್ಕಳಿಗಾಗಿ ವಿಶೇಷ ವಿನೋದಾವಳಿಗಳನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.
ಪ್ರತಿಷ್ಠಾನದ ಮಾರ್ಗದರ್ಶಕರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಅತ್ಯಂತ ಯಶಸ್ವಿಯಾಗಿ ಸಮಾಪ್ತಿಗೊಂಡ ಕಳೆದೆರಡು ಬಾರಿಯ ಫುಡ್ ಫೆಸ್ಟ್ ನಿಂದ ಉತ್ತೇಜನಗೊಂಡು ಸುರತ್ಕಲ್, ಮೂಡಬಿದ್ರಿ ಸೇರಿದಂತೆ ಅನೇಕ ಕಡೆಗಳಲ್ಲಿ ಇದೇ ರೀತಿಯ ಕಾರ್ಯಕ್ರಮಗಳು ನಡೆದಿವೆ. ಇದು ಎಲ್ಲೆಡೆ ಆಹಾರ ಸಂಸ್ಕೃತಿಯ ವಿನಿಮಯಕ್ಕೆ ದಾರಿಯಾಗಲಿದ್ದು ಈ ಬಾರಿಯ ಸ್ಟ್ರೀಟ್ ಫುಡ್ ಫಿಯೆಸ್ಟ ಈ ಹಿಂದಿಗಿಂತಲೂ ಹೆಚ್ಚಿನ ಜನರನ್ನು ಆಕರ್ಷಿಸಿ ಯಶಸ್ವಿಯಾಗಲಿ ಎಂದು ಹಾರೈಸಿದರು.


ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ್, ನರೇಶ್ ಶೆಣೈ, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು