3:43 PM Friday15 - August 2025
ಬ್ರೇಕಿಂಗ್ ನ್ಯೂಸ್
ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ನಂಜನಗೂಡು: ಕೆರೆಗೆ ನೀರು ತುಂಬಿಸುವಂತೆ ಒತ್ತಾಯಿಸಿ ರೈತರಿಂದ ಬೃಹತ್ ಪ್ರತಿಭಟನೆ

06/11/2024, 19:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರೈತರ ಜೀವನಾಡಿಯಾದ ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದ ಸರ್ವೆ ನಂಬರ್ 517ರಲ್ಲಿರುವ 19 ಎಕರೆ ಪ್ರದೇಶದ ಕೆರೆಗೆ ಕಬಿನಿ ನದಿಯಿಂದ ನೀರು ತುಂಬಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.


ಜಿಲ್ಲಾ ರೈತ ಸಂಘದ ಅಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ಕೆರೆಯ ಅಂಗಳದಲ್ಲಿಯೇ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ರೈತ ಸಂಘದ ಪದಾಧಿಕಾರಿಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ರೈತರು ಸಾರ್ವಜನಿಕರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಈ ಕೆರೆ ತುಂಬಿದರೆ ಹೆಡತಲೆ, ಹೆಮ್ಮರಗಾಲ, ಕುಂಬರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ರೈತರ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಸೇರಿದಂತೆ ಅಂತರ್ಜಲ ಹೆಚ್ಚಾಗಿ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗುತ್ತದೆ .ಸ್ವಾತಂತ್ರ್ಯ ಬಂದು 80 ವರ್ಷಗಳೇ ಕಳೆದರೂ ಇನ್ನೂ ನಾವು ನೀರಿಗಾಗಿ ಬಿಕ್ಷೆ ಬೇಡುವಂತಾಗಿದೆ. ಈ ಬಾರಿ ಉತ್ತಮ ಮಳೆಯಾಗಿದ್ದು ನೂರಾರು ಟಿಎಂಸಿ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದೆ. ಆದರೆ ನಮ್ಮ ರೈತರಿಗೆ ಕೇವಲ ಅಲ್ಪಸ್ವಲ್ಪ ನೀರು ಬಿಡಲು ನಮ್ಮನ್ನಾಳುವ ಸರ್ಕಾರಗಳು ಹಾಗೂ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಈ ಭಾಗದ ರೈತರ ಅನುಕೂಲಕ್ಕಾಗಿ ಈ ಕೆರೆಗೆ ನೀರು ತುಂಬಿಸುವವರೆಗೂ ನಿರಂತರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಸೋಮಣ್ಣ ಮಾತನಾಡಿ, ಈಗಾಗಲೇ ದೇವನೂರು ಏತ ನೀರಾವರಿ ಮೂಲಕ ಈ ಕೆರೆಯೂ ಸೇರಿದಂತೆ ಬೇರೆಬೇರೆ ಕೆರೆ ತುಂಬಿಸುವ ಯೋಜನೆಗಾಗಿ ಸುಮಾರು 9೦ ಕೋಟಿ ರೂಪಾಯಿ ಅನುದಾನ ನೀಡಿದ್ದು ಟೆಂಡರ್ ಸಹ ಕರೆಯಲಾಗಿದೆ ಟೆಂಡರ್ ಗೆ ಸಂಬಂಧಿಸಿದಂತೆ ಗುತ್ತಿಗೆದಾರರೊಬ್ಬರು ಕೋರ್ಟ್ ಮೊರೆ ಹೋಗಿರುವುದರಿಂದ ಕಾಮಗಾರಿ ಸ್ವಲ್ಪ ತಡವಾಗಿದೆ. ನವೆಂಬರ್ 13ರಂದು ಕೇಸ್ ಇರುವುದರಿಂದ ಅದು ಮುಗಿದ ತಕ್ಷಣ ಕಾಮಗಾರಿ ಪ್ರಾರಂಭಿಸುವುದಾಗಿ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ಕೈಬಿಡಲಾಯಿತು.
ಇದಕ್ಕೂ ಮುನ್ನ ಹೆಡತಲೆ, ಹೆಮ್ಮರಗಾಲ ಹಾಗೂ ಕುಂಬರಹಳ್ಳಿ ಗ್ರಾಮದ ರೈತರು ಕಾಲ್ನಡಿಗೆ ಮೂಲಕ ಮೆರವಣಿಗೆ ಬಂದು ಕೆರೆಯ ಬಳಿ ಜಮಾವಣೆಗೊಂಡರು
ಬಂದ ಎಲ್ಲಾ ರೈತರಿಗೆ ಸ್ಥಳದಲ್ಲೇ ಅಡುಗೆ ತಯಾರು ಮಾಡಲಾಗುತ್ತಿತ್ತು.
ತಹಶೀಲ್ದಾರ್ ಶಿವಕುಮಾರ್ ಕಾಸನೂರು, ನೀರಾವರಿ ಇಲಾಖೆ ಅಧೀಕ್ಷಕ ಇಂಜಿನಿಯರ್ ಮಹೇಶ್, ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹಿಮ್ಮಾವು ರಘು ತಾಲೂಕು ಘಟಕದ ಅಧ್ಯಕ್ಷ ಸತೀಶ್ ರಾವ್ ಸೇರಿದಂತೆ ರೈತ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸುತ್ತಮುತ್ತಲ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು