10:39 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ದೀಪಾವಳಿಗೆ ಬಡವರ ಬಾಳಲ್ಲಿ ಖುಷಿ ಮೂಡಿಸಿದ ರವಿ ಪೂಜಾರಿ: ನಿರ್ಗತಿಕರಿಗೆ ಉಚಿತವಾಗಿ ಬಟ್ಟೆ ವಿತರಣೆ

06/11/2024, 21:40

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿಯ ಆರ್‌.ಎಸ್.ಪಿ. ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ರವಿ ಪೂಜಾರಿ ಅವರು ದೀಪಾವಳಿ ಶುಭ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನದ ಹತ್ತಿರದಲ್ಲಿನ ನಿರ್ಗತಿಕರು, ಬಡವರು ಹಾಗೂ ಕೆಇಬಿ ಕಾರ್ಮಿಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಿದರು.


ಬಟ್ಟೆಗಳನ್ನು ವಿತರಿಸಿ ಮಾತನಾಡಿದ ರವಿ ಪೂಜಾರಿ, ನಾನು ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಡವರ ಬಾಳಲ್ಲಿ ಖುಷಿ ಮೂಡಿಸಿ, ಅವರು ಸಂತೋಷದಿಂದ ಹಬ್ಬವನ್ನು ಆಚರಿಸಲು ಸಹಾಯ, ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ಅಥಣಿ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಸಂಚರಿಸಿ ನಿರ್ಗತಿಕರಿಗೆ, ಬಡವರಿಗೆ ಬಟ್ಟೆಗಳನ್ನು ವಿತರಿಸುತ್ತ ಬಂದಿದ್ದೇನೆ. ಬಡವರಿಗೆ ಅನ್ನದಾಸೋಹ, ದಾನ, ಧರ್ಮ ಮಾಡುವ ಮೂಲಕ ಜನ ಸೇವೆಯ ಕಾರ್ಯ ಮಾಡುತ್ತಿದ್ದೇನೆ. ಪ್ರತಿ ವರ್ಷದಂತೆ ಈ ವರ್ಷವೂ ಬಟ್ಟೆಗಳನ್ನು ವಿತರಿಸುತ್ತಿದ್ದೇನೆ. ಸಮಾಜಮುಖಿ ಕಾರ್ಯಗಳು, ಬಡ ಜನರ ಸೇವೆಯಲ್ಲಿ ಸಾರ್ಥಕತೆ ಕಾಣುವ ಉದ್ದೇಶದಿಂದ ಈಗಾಗಲೇ ನಾನು ಅಥಣಿ ಪಟ್ಟಣದಲ್ಲಿ ಪ್ರಾರಂಭಿಸಿರುವ ಸಂಚಾರಿ ವಾಹನದ ಮೂಲಕ ನಿತ್ಯ ಅನ್ನದಾಸೋಹ ಹಾಗೂ ಬಡವರಿಗೆ ಉಚಿತ ಆಂಬ್ಯುಲೆನ್ಸ್‌ ಸೇವೆಗೆ ಇತ್ತೀಚೆಗೆ ಒಂದು ವರ್ಷ ಪೂರ್ಣಗೊಂಡಿದೆ ಎಂದು ಇದೇ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.
ನಾನು ಬಡ ಕುಟುಂಬದಿಂದ ಬಂದವನಾಗಿದ್ದು ಬಡ ಜನರ ಬದುಕಿನ ಸಂಕಷ್ಟಗಳನ್ನು ಅರಿತಿದ್ದೇನೆ. ಆದ್ದರಿಂದ ನನ್ನ ಕೈಲಾದಷ್ಟು ಅಂಥವರಿಗೆ ಸಹಾಯ ಸಹಕಾರ ಮಾಡಬೇಕು ಎಂಬ ಮಹಾದಾಸೆಯಿಂದ ಹಾಗೂ ನನ್ನ ಆತ್ಮತೃಪ್ತಿಗಾಗಿ ಇಂತಹ ಸಮಾಜ ಸೇವಾ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ ಎಂದು ರವಿ ಪೂಜಾರಿ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರಶಾಂತ ತೋಡಕರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು