5:32 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ದೀಪಾವಳಿಗೆ ಬಡವರ ಬಾಳಲ್ಲಿ ಖುಷಿ ಮೂಡಿಸಿದ ರವಿ ಪೂಜಾರಿ: ನಿರ್ಗತಿಕರಿಗೆ ಉಚಿತವಾಗಿ ಬಟ್ಟೆ ವಿತರಣೆ

06/11/2024, 21:40

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿಯ ಆರ್‌.ಎಸ್.ಪಿ. ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ರವಿ ಪೂಜಾರಿ ಅವರು ದೀಪಾವಳಿ ಶುಭ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನದ ಹತ್ತಿರದಲ್ಲಿನ ನಿರ್ಗತಿಕರು, ಬಡವರು ಹಾಗೂ ಕೆಇಬಿ ಕಾರ್ಮಿಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಿದರು.


ಬಟ್ಟೆಗಳನ್ನು ವಿತರಿಸಿ ಮಾತನಾಡಿದ ರವಿ ಪೂಜಾರಿ, ನಾನು ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಬಡವರ ಬಾಳಲ್ಲಿ ಖುಷಿ ಮೂಡಿಸಿ, ಅವರು ಸಂತೋಷದಿಂದ ಹಬ್ಬವನ್ನು ಆಚರಿಸಲು ಸಹಾಯ, ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ಅಥಣಿ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಸಂಚರಿಸಿ ನಿರ್ಗತಿಕರಿಗೆ, ಬಡವರಿಗೆ ಬಟ್ಟೆಗಳನ್ನು ವಿತರಿಸುತ್ತ ಬಂದಿದ್ದೇನೆ. ಬಡವರಿಗೆ ಅನ್ನದಾಸೋಹ, ದಾನ, ಧರ್ಮ ಮಾಡುವ ಮೂಲಕ ಜನ ಸೇವೆಯ ಕಾರ್ಯ ಮಾಡುತ್ತಿದ್ದೇನೆ. ಪ್ರತಿ ವರ್ಷದಂತೆ ಈ ವರ್ಷವೂ ಬಟ್ಟೆಗಳನ್ನು ವಿತರಿಸುತ್ತಿದ್ದೇನೆ. ಸಮಾಜಮುಖಿ ಕಾರ್ಯಗಳು, ಬಡ ಜನರ ಸೇವೆಯಲ್ಲಿ ಸಾರ್ಥಕತೆ ಕಾಣುವ ಉದ್ದೇಶದಿಂದ ಈಗಾಗಲೇ ನಾನು ಅಥಣಿ ಪಟ್ಟಣದಲ್ಲಿ ಪ್ರಾರಂಭಿಸಿರುವ ಸಂಚಾರಿ ವಾಹನದ ಮೂಲಕ ನಿತ್ಯ ಅನ್ನದಾಸೋಹ ಹಾಗೂ ಬಡವರಿಗೆ ಉಚಿತ ಆಂಬ್ಯುಲೆನ್ಸ್‌ ಸೇವೆಗೆ ಇತ್ತೀಚೆಗೆ ಒಂದು ವರ್ಷ ಪೂರ್ಣಗೊಂಡಿದೆ ಎಂದು ಇದೇ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.
ನಾನು ಬಡ ಕುಟುಂಬದಿಂದ ಬಂದವನಾಗಿದ್ದು ಬಡ ಜನರ ಬದುಕಿನ ಸಂಕಷ್ಟಗಳನ್ನು ಅರಿತಿದ್ದೇನೆ. ಆದ್ದರಿಂದ ನನ್ನ ಕೈಲಾದಷ್ಟು ಅಂಥವರಿಗೆ ಸಹಾಯ ಸಹಕಾರ ಮಾಡಬೇಕು ಎಂಬ ಮಹಾದಾಸೆಯಿಂದ ಹಾಗೂ ನನ್ನ ಆತ್ಮತೃಪ್ತಿಗಾಗಿ ಇಂತಹ ಸಮಾಜ ಸೇವಾ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ ಎಂದು ರವಿ ಪೂಜಾರಿ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರಶಾಂತ ತೋಡಕರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು