9:13 AM Monday11 - August 2025
ಬ್ರೇಕಿಂಗ್ ನ್ಯೂಸ್
ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ

ಇತ್ತೀಚಿನ ಸುದ್ದಿ

ಐತಿಹಾಸಿಕ ಎಡನೀರು ಮಠ ಹಾಗೂ ಸ್ವಾಮೀಜಿಗೆ ರಕ್ಷಣೆ ನೀಡಿ: ಕೈಯೂರು ನಾರಾಯಣ ಭಟ್ ಆಗ್ರಹ

07/11/2024, 10:32

ಬಂಟ್ವಾಳ(reporterkarnataka.com): ಸುಮಾರು ೧೩೦೦ ವರ್ಷಗಳ ಇತಿಹಾಸವಿರುವ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿಗೆ ದುಷ್ಕರ್ಮಿಗಳು ತಡೆಯೊಡ್ಡಿ ಅಡ್ಡಿಪಡಿಸಿದ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಬಿ.ಸಿ. ರೋಡ್ ನ ಪತ್ರಿಕಾ ಭವನದಲ್ಲಿ ಶ್ರೀ ಕ್ಷೇತ್ರ ಎಡನೀರು ಮಠದ ಭಕ್ತಾಭಿಮಾನಿಗಳ ಬಳಗ ಬಂಟ್ವಾಳ ಇವರು ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಾಸರಗೋಡು ಎಡನೀರು ಮಠವು ತನ್ನದೇ ಆದ ವಿಶಿಷ್ಠ ಪರಂಪರೆ ಹೊಂದಿದ್ದು ಎಲ್ಲಾ ಜಾತಿ,ಮತ,ಸಂಪ್ರದಾಯಗಳನ್ನು ಗೌರವಿಸುವ ಹಿನ್ನೆಲೆ ಹೊಂದಿದೆ. ಮುಖ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಸ್ವಾಮೀಜಿಯವರು ತೆರಳುತ್ತಿರುವುದನ್ನು ಕಂಡು ದುರುದ್ದೇಶ ಪೂರ್ವಕವಾಗಿ ‌ ಆಕ್ರಮಣಕಾರಿ ರೀತಿಯಲ್ಲಿ ಕಾರಿಗೆ ಹಾನಿಗೊಳಿಸಿ ಬೆದರಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
ಈ ಮಠಕ್ಕೆ ಮುಸಲ್ಮಾನರು ಸಹಿತ ದೇಶದ ವಿವಿಧೆಡೆ ಭಕ್ತರಿದ್ದು ಇಲ್ಲಿನ ಉತ್ಸವಾದಿಗಳಿಗೆ ದೇಣಿಗೆ ಹೊರೆಕಾಣಿಕೆ ಸಮರ್ಪಿಸುತ್ತಿದ್ದಾರೆ. ಲಕ್ಷಾಂತರ ಮಠದ ಅಭಿಮಾನಿಗಳಿಗೆ ಈ ಘಟನೆಯಿಂದ ಖೇದವಾಗಿದೆ ಎಂದು‌ ತಿಳಿಸಿದರು.

ಕನ್ನಡ ಭಾಷಾ ಸಾಹಿತ್ಯ,ಯಕ್ಷಗಾನ ಹಾಗೂ ವಿವಿಧ ಕಲೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಶ್ರೀಗಳಿಗೆ ಮತ್ತು ಮಠಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು‌ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಕೋಶಾಧಿಕಾರಿ ಅನಾರು ಕೃಷ್ಣ ಶರ್ಮ, ಜಿಲ್ಲಾ ಪ್ರತಿನಿಧಿ ರಾಜಮಣಿ ರಾಮ ಕುಂಜ, ಬಂಟ್ವಾಳ ತಾಲೂಕು‌ ಅಧ್ಯಕ್ಷ ಸುಬ್ರಾಯ ಮಡಿವಾಳ, ಕಾರ್ಯದರ್ಶಿ ಕೋಕಳ ರಾಮಕೃಷ್ಣ ನಾಯಕ್ ಹಾಗೂ ಡಾ.ಮಹಾಲಿಂಗ ಭಟ್, ನ್ಯಾಯವಾದಿ ರವೀಂದ್ರ ಕುಕ್ಕಾಜೆ, ಶೇಖರ ಮಂಚಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು