1:59 PM Tuesday21 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಆಸ್ಪತ್ರೆಯಲ್ಲಿ ನಾಪತ್ತೆಯಾದ ಪುಟ್ಟ ಬಾಲಕಿ: ಸಿಡಿಪಿಓ ಅಧಿಕಾರಿಗಳ ಕಾರ್ಯಾಚರಣೆಯಿಂದ ಕೆಲವೇ ತಾಸಿನಲ್ಲಿ ಪೋಷಕರ ಮಡಿಲಿಗೆ

07/11/2024, 15:05

ಮೋಹನ್ ನಂಜಗೂಡು ಮೈಸೂರು

info.reporterkarnataka@gmail.com

ತಾಯಿ ಮತ್ತು ಅಜ್ಜಿಯ ಜೊತೆ ಆಸ್ಪತ್ರೆಗೆ ಧಾವಿಸಿದ್ದ ಪುಟ್ಟ ಬಾಲಕಿ ನಾಪತ್ತೆಯಾಗಿದ್ದ ಕೆಲವೇ ಗಂಟೆಗಳಲ್ಲಿ ಸಿ ಡಿ ಪಿ ಓ ಭವ್ಯಶ್ರೀ ಮತ್ತು ಸಿಬ್ಬಂದಿಗಳ ಜಾಗೃತಿಯಿಂದ ಪೋಷಕರ ಕೈ ಸೇರಿ ಪೋಷಕರಲ್ಲಿ ಕಾಡಿದ್ದ ಆತಂಕ ದೂರವಾದ ಘಟನೆ ನಂಜನಗೂಡಿನಲ್ಲಿ ನಡೆದಿದೆ
ನಂಜನಗೂಡು ನಗರದ ನೀಲಕಂಠ ನಗರ ಬಡಾವಣೆಯ ಯೋಗೇಶ್ ಎಂಬುವರ ಪತ್ನಿ ಸೌಭಾಗ್ಯ ತನ್ನ ತಾಯಿ ಮತ್ತು ನಾಲ್ಕು ವರ್ಷದ ಪುಟ್ಟ ಮಗುವಿನ ಜೊತೆಗೂಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಲುವಾಗಿ ದಾವಿಸಿದ್ದರು.


ತನ್ನ ತಾಯಿಯ ಜೊತೆ ಸೌಭಾಗ್ಯ ವೈದ್ಯರ ಬಳಿ ತೆರಳಿದ ಸಂದರ್ಭ ಹೊರ ಭಾಗದಲ್ಲಿ ನಿಂತಿದ್ದ ಪುಟ್ಟ ಬಾಲಕಿ ತಬ್ಬಿಬ್ಬಾಗಿ ಆಸ್ಪತ್ರೆಯಿಂದ ಹೊರನಡೆದಿದೆ.
ತನ್ನ ಅಜ್ಜಿ ಮತ್ತು ತಾಯಿ ನನ್ನನ್ನು ಬಿಟ್ಟು ಹೋಗಿದ್ದಾರೆ ಎಂಬ ಆತಂಕದಲ್ಲಿ ಪುಟ್ಟ ಬಾಲಕಿ ಆಸ್ಪತ್ರೆಯಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದ ಹುಲ್ಲಹಳ್ಳಿ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಬಳಿಯ ಅಂಗಡಿ ಮುಂಭಾಗದಲ್ಲಿ ತಾಯಿ ಮತ್ತು ಅಜ್ಜಿಯ ಹುಡುಕಾಟದಲ್ಲಿ ತಲ್ಲಿನನಾಗಿದ್ದಳು. ನಾಲ್ಕು ವರ್ಷದ ಪುಟ್ಟ ಬಾಲಕಿಯ ಚಲನವಲನವನ್ನು ನೋಡಿದ ಅಂಗಡಿಯ ಮಾಲೀಕರು ನಗರದ ಸಿಡಿಪಿಓ ಭವ್ಯಶ್ರೀ ರವರ ದೂರವಾಣಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದು ಕೂಡಲೇ ಧಾವಿಸಿದ ಸಿಡಿಪಿಓ ಭವ್ಯಶ್ರೀ ಮತ್ತು ಸಾಂತ್ವನ ಇಲಾಖೆಯ ಸಾವಿತ್ರಿ ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು ವಶಕ್ಕೆ ಪಡೆದು ಸರಿ ಸುಮಾರು ಎರಡು ಗಂಟೆಗಳ ಕಾಲ ಮಗುವಿನ ಪೋಷಕರ ಹುಡುಕಾಟದಲ್ಲಿ ತೊಡಗಿದ್ದಾರೆ. ನಂತರ ಮಗು ಬಂದ ದಾರಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಧಾವಿಸಿದ ಬಳಿಕ ಮಗು ನೇರವಾಗಿ ತನ್ನ ಅಜ್ಜಿಯ ಬಳಿ ತೆರಳಿದೆ. ಪುಟ್ಟ ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದ ಪೋಷಕರು ನಿರಾಳವಾಗಿ ಸಿಡಿಪಿಓ ಮತ್ತು ಸಿಬ್ಬಂದಿಗಳಿಗೆ ಹ್ಯಾಟ್ಸಾಫ್ ಹೇಳಿದ್ದಾರೆ. ಒಟ್ಟಾರೆ ಸಿಡಿಪಿಓ ಇಲಾಖೆ ಅಧಿಕಾರಿಗಳ ಜಾಗೃತಿಯಿಂದ ಪುಟ್ಟ ಬಾಲಕಿ ತಾಯಿಯ ಮಡಿಲು ಸೇರಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು