9:28 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ಆಸ್ಪತ್ರೆಯಲ್ಲಿ ನಾಪತ್ತೆಯಾದ ಪುಟ್ಟ ಬಾಲಕಿ: ಸಿಡಿಪಿಓ ಅಧಿಕಾರಿಗಳ ಕಾರ್ಯಾಚರಣೆಯಿಂದ ಕೆಲವೇ ತಾಸಿನಲ್ಲಿ ಪೋಷಕರ ಮಡಿಲಿಗೆ

07/11/2024, 15:05

ಮೋಹನ್ ನಂಜಗೂಡು ಮೈಸೂರು

info.reporterkarnataka@gmail.com

ತಾಯಿ ಮತ್ತು ಅಜ್ಜಿಯ ಜೊತೆ ಆಸ್ಪತ್ರೆಗೆ ಧಾವಿಸಿದ್ದ ಪುಟ್ಟ ಬಾಲಕಿ ನಾಪತ್ತೆಯಾಗಿದ್ದ ಕೆಲವೇ ಗಂಟೆಗಳಲ್ಲಿ ಸಿ ಡಿ ಪಿ ಓ ಭವ್ಯಶ್ರೀ ಮತ್ತು ಸಿಬ್ಬಂದಿಗಳ ಜಾಗೃತಿಯಿಂದ ಪೋಷಕರ ಕೈ ಸೇರಿ ಪೋಷಕರಲ್ಲಿ ಕಾಡಿದ್ದ ಆತಂಕ ದೂರವಾದ ಘಟನೆ ನಂಜನಗೂಡಿನಲ್ಲಿ ನಡೆದಿದೆ
ನಂಜನಗೂಡು ನಗರದ ನೀಲಕಂಠ ನಗರ ಬಡಾವಣೆಯ ಯೋಗೇಶ್ ಎಂಬುವರ ಪತ್ನಿ ಸೌಭಾಗ್ಯ ತನ್ನ ತಾಯಿ ಮತ್ತು ನಾಲ್ಕು ವರ್ಷದ ಪುಟ್ಟ ಮಗುವಿನ ಜೊತೆಗೂಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಲುವಾಗಿ ದಾವಿಸಿದ್ದರು.


ತನ್ನ ತಾಯಿಯ ಜೊತೆ ಸೌಭಾಗ್ಯ ವೈದ್ಯರ ಬಳಿ ತೆರಳಿದ ಸಂದರ್ಭ ಹೊರ ಭಾಗದಲ್ಲಿ ನಿಂತಿದ್ದ ಪುಟ್ಟ ಬಾಲಕಿ ತಬ್ಬಿಬ್ಬಾಗಿ ಆಸ್ಪತ್ರೆಯಿಂದ ಹೊರನಡೆದಿದೆ.
ತನ್ನ ಅಜ್ಜಿ ಮತ್ತು ತಾಯಿ ನನ್ನನ್ನು ಬಿಟ್ಟು ಹೋಗಿದ್ದಾರೆ ಎಂಬ ಆತಂಕದಲ್ಲಿ ಪುಟ್ಟ ಬಾಲಕಿ ಆಸ್ಪತ್ರೆಯಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದ ಹುಲ್ಲಹಳ್ಳಿ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಬಳಿಯ ಅಂಗಡಿ ಮುಂಭಾಗದಲ್ಲಿ ತಾಯಿ ಮತ್ತು ಅಜ್ಜಿಯ ಹುಡುಕಾಟದಲ್ಲಿ ತಲ್ಲಿನನಾಗಿದ್ದಳು. ನಾಲ್ಕು ವರ್ಷದ ಪುಟ್ಟ ಬಾಲಕಿಯ ಚಲನವಲನವನ್ನು ನೋಡಿದ ಅಂಗಡಿಯ ಮಾಲೀಕರು ನಗರದ ಸಿಡಿಪಿಓ ಭವ್ಯಶ್ರೀ ರವರ ದೂರವಾಣಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದು ಕೂಡಲೇ ಧಾವಿಸಿದ ಸಿಡಿಪಿಓ ಭವ್ಯಶ್ರೀ ಮತ್ತು ಸಾಂತ್ವನ ಇಲಾಖೆಯ ಸಾವಿತ್ರಿ ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು ವಶಕ್ಕೆ ಪಡೆದು ಸರಿ ಸುಮಾರು ಎರಡು ಗಂಟೆಗಳ ಕಾಲ ಮಗುವಿನ ಪೋಷಕರ ಹುಡುಕಾಟದಲ್ಲಿ ತೊಡಗಿದ್ದಾರೆ. ನಂತರ ಮಗು ಬಂದ ದಾರಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಧಾವಿಸಿದ ಬಳಿಕ ಮಗು ನೇರವಾಗಿ ತನ್ನ ಅಜ್ಜಿಯ ಬಳಿ ತೆರಳಿದೆ. ಪುಟ್ಟ ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದ ಪೋಷಕರು ನಿರಾಳವಾಗಿ ಸಿಡಿಪಿಓ ಮತ್ತು ಸಿಬ್ಬಂದಿಗಳಿಗೆ ಹ್ಯಾಟ್ಸಾಫ್ ಹೇಳಿದ್ದಾರೆ. ಒಟ್ಟಾರೆ ಸಿಡಿಪಿಓ ಇಲಾಖೆ ಅಧಿಕಾರಿಗಳ ಜಾಗೃತಿಯಿಂದ ಪುಟ್ಟ ಬಾಲಕಿ ತಾಯಿಯ ಮಡಿಲು ಸೇರಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು