6:22 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮೋದಿ, ಅಮಿತ್ ಶಾ ವಿರುದ್ಧ ಟೀಕೆ ಮಾಡಿದ್ದಕ್ಕೆ ಇಡಿಯಿಂದ ಪ್ರಕರಣ ಹಾಕಿಸಿದ್ರು: ಮುಖ್ಯಮಂತ್ರಿ ಸಿದ್ದರಾಮಯ್ಯ

07/11/2024, 18:22

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಕೆ ಮಾಡಿದ್ದಕ್ಕೆ ಇಡಿಯಿಂದ ಪ್ರಕರಣ ಹಾಕಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗಿಸಿದರೆ‌ ಕಾಂಗ್ರೆಸ್ ಮುಗಿಸದಂಗೆ ಅಂತ ನನ್ನ ಮೇಲೆ ಪ್ರಕರಣ ಹಾಕಿಸಿದ್ದಾರೆ. ನಿಮ್ಮ ಆಶೀರ್ವಾದ ಇರೋವರೆಗೂ ‌ನನಗೆ ಏನೂ ಆಗಲ್ಲ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‌ಹೇಳಿದರು.
ಗುರುವಾರ ಸಂಡೂರಿನ‌ ಚೋರನೂರು ಗ್ರಾಮದಲ್ಲಿ ಹಮ್ಮಿಕೊಂಡ ‌ಪ್ರಚಾರದಲ್ಲಿ‌ ಮಾತನಾಡಿದ ಅವರು, ‌ಸಂಡೂರು ಉಪ ಚುನಾವಣೆ ‌ಮಹತ್ವಪೂರ್ಣವಾದ ಚುನಾವಣೆ‌. ತುಕಾರಂ ‌ಗೆದ್ದರೆ ಲಾಡ್ ಗೆದ್ದ ಹಾಗೆ‌, ನಾನು ಗೆದ್ದ‌ ಹಾಗೆ. ದೇಶದಲ್ಲಿ ಆಹಾರದ ‌ಕೊರತೆ‌ ಇತ್ತು, ಆಹಾರ ಇಲ್ಲದೇ ಸಾಯ್ತಾ ಇದ್ರು, ಕಾಂಗ್ರೆಸ್ ‌ಆಹಾರ ಸ್ವಾವಲಂಬನೆ‌‌ ಸಾಧಿಸಿತು. ಆವಾಗಿಂದ‌ ಆಹಾರ ‌ಭದ್ರತೆ ಜಾರಿಗೆ ಬಂತು. ಬಿಜೆಪಿಯವರು ದೇಶಕ್ಕಾಗಿ, ಜನರಿಗಾಗಿ ಏನು ಮಾಡಿದ್ರು? ದೇವರಾಜು ಅರಸು ನಂತರ 5 ವರ್ಷ ಅಧಿಕಾರ ಮಾಡಿದ್ದು ‌ಸಿದ್ದರಾಮಯ್ಯ ಮಾತ್ರ. ನಾವು ನೀಡಿದ್ದ ಎಲ್ಲ ಭರವಸೆ‌ ಈಡೇರಿಸಿದ್ದೇವೆ. 136 ಸ್ಥಾನ ಕಾಂಗ್ರೆಸ್ ಗೆ ಜನರು ಕೊಟ್ಟು, ಪೂರ್ಣ ಬಹುಮತ ಸರಕಾರ ‌ಕೊಟ್ರು, ನಾವು ಅಧಿಕಾರಕ್ಕೆ ‌ಬಂದ‌ ಕೂಡಲೇ ಐದು ಗ್ಯಾರಂಟಿ ಯೋಜನೆ ಜಾರಿ‌ ಮಾಡಿದ್ದೀವಿ. ಕುಮಾರಸ್ವಾಮಿ ಭಾಷಣ ಮಾಡಿದ್ರು‌ ಐದು ವರ್ಷ ಜನರ ಜತೆ‌‌ ಕೆಲಸ ಮಾಡಿದವರು ಗೆಲ್ಲಲ್ಲ, ದುಡ್ಡು‌ ಕೊಟ್ಟು ವೋಟು‌ ತಂಗೊಂಡು ಗೆಲ್ತಿವಿ‌ ಅಂತಾ‌ ಹೇಳಿದ್ದ ಭಾಷಣ‌ ತುಣುಕು‌‌ ಇದೆ, ಚನ್ನಪಟ್ಟಣ‌ ಚುನಾವಣೆ ‌ಪ್ರಚಾರದಲ್ಲಿ ನಾವು ಅದನ್ನ ಪ್ಲೇ ಮಾಡ್ತಾ ಇದ್ದೀವಿ. ಸಾಲ ಮನ್ನಾ ಯಾರಾದರೂ ಮಾಡಿದ್ರಾ?, ಬಿಜೆಪಿ ‌ಅವರು ಸಾಲ ಮನ್ನಾ ಮಾಡಿಲ್ಲ. ನಾವು ರೈತರ ಸಾಲ ಮನ್ನಾ ಮಾಡಿದ್ದೀವಿ, ಬಿಜೆಪಿ ‌ಅವರು ಬಂಡವಾಳಶಾಹಿಗಳ ಸಾಲ ಮನ್ನಾ ಮಾಡಿದರು. 16 ಲಕ್ಷ ‌ಕೋಟಿ ಸಾಲ‌ ಮನ್ನಾ ಮಾಡಿದರು. ನಾವು ಸಹಕಾರ ಸಂಘದಲ್ಲಿ ರೈತರು ಮಾಡಿದ ಸಾಲ‌ ಮನ್ನಾ ಮಾಡಿದ್ದೇವೆ. ವಿಧಾನಸೌಧದಲ್ಲಿ ಯಡಿಯೂರಪ್ಪ ‌ಹೇಳಿದ್ರು, ಸಾಲ ಮನ್ನಾ ಮಾಡಕ್ಕಗಲ್ಲ, ನೋಟ ಪ್ರಿಂಟ್ ಮಾಡೋ ಮಷಿನ್ ಇಲ್ಲ ಅಂದ್ರು ಮಿ.ಯಡಿಯೂರಪ್ಪ, ಅಂತವರು ಮಣ್ಣಿನ ಮಗ, ರೈತರ ಮಗ ಅಂತಾರೆ‌ ಎಂದು ವ್ಯಂಗ್ಯವಾಡಿದರು.
ಮೋದಿ ಅವರು ಅಚ್ಛೇ ದಿನ ಆಯೆಂಗಾ ಅಂದರು, ಕಪ್ಪು ‌ಹಣ ತರ್ತಿವಿ‌ ಪ್ರತಿ ‌ಕುಟುಂಬಕ್ಕೆ 15 ಲಕ್ಷ ರೂ. ಹಣ ಹಾಕ್ತಿನಿ ಅಂದ್ರು ಹಾಕಿದ್ರಾ? ಕೊಟ್ಟ‌ ಮಾತಿಗೆ ತಪ್ಪಿದ ಬಿಜೆಪಿ, ಕೊಟ್ಟ ಮಾತಿಗೆ ನಡೆದುಕೊಂಡ ಕಾಂಗ್ರೆಸ್ ಎರಡರ ನಡುವೆ ಚುನಾವಣೆ‌‌ ನಡಿತಾ‌ ಇದೆ ಯಾರಿಗೆ ವೋಟು ಹಾಕ್ತಿರಾ? ಬಣ್ಣದ ಮಾತು ಆಡುವ ಬಿಜೆಪಿ ಅವರಿಗೆ ವೋಟ್ ಹಾಕಬೇಡಿ, ನನ್ನ ಮೇಲೆ, ನಾಗೇಂದ್ರ ‌ಮೇಲೂ ಸುಳ್ಳು ‌ಕೇಸ್ ಹಾಕಿಸಿವೆ ಬಿಜೆಪಿ‌ ಗಿರಾಕಿಗಳು. ನಿಮ್ಮ ಆಶೀರ್ವಾದ ಇರೋವರೆಗೂ ನನಗೆ ಏನೂ ಆಗಲ್ಲ. ನೀವೆಲ್ಲ ತಪ್ಪದೇ ಕಾಂಗ್ರೆಸ್ ಗುರುತಿಗೆ ವೋಟು ಹಾಕಿ ಅನ್ನಪೂರ್ಣ ಅವರನ್ನು ಗೆಲ್ಲಿಸಿ ಎಂದು ಸಿದ್ದರಾಮಯ್ಯ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು