8:23 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬೆಳಗಾವಿ: ಅಥಣಿ ಹೊರವಲಯದ ಮನೆಯಲ್ಲಿ ದಂಪತಿ ಶವ ಪತ್ತೆ: ಕೊಲೆ ಶಂಕೆ; ಚುರುಕುಗೊಂಡ ಪೊಲೀಸ್ ತನಿಖೆ

08/11/2024, 10:22

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚವ್ಹಾಣ ತೋಟದಲ್ಲಿ ದಂಪತಿಯ ಶವ ಪತ್ತೆಯಾಗಿದ್ದು, ಕೊಲೆಗೀಡಾಗಿರಬೇಕೆಂದು ಶಂಕಿಸಲಾಗಿದೆ.
ಚವ್ಹಾಣ ತೋಟದಲ್ಲಿನ ನಾನಾಸಾಹೇಬ ಚವ್ಹಾಣ (58) ಮತ್ತು ಜಯಶ್ರೀ ಚವ್ಹಾಣ (51) ದಂಪತಿ ನಿಗೂಢವಾಗಿ ಸಾವಿಗೀಡಾಗಿದವರು. ಈ ಮುನ್ನ ಇದನ್ನು‌ ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು.
ಸುಮಾರು 6 -7 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಸಾವಿಗೀಡಾದ ದಂಪತಿಯ ಪುತ್ರ ದಿಲೀಪ್ ದರೋಡೆ ಪ್ರಕರಣವೊಂದರಲ್ಲಿ ಜಮಖಂಡಿಯಲ್ಲಿ ಬಂಧಿಸಲ್ಪಟ್ಟಿದ್ದ. ಆತನನ್ನು ಬಿಡಿಸಲು ದಂಪತಿ 7-8 ದಿನಗಳ ಹಿಂದೆ ಜಮಖಂಡಿಗೆ ತೆರಳಿ ವಕೀಲರನ್ನು ಭೇಟಿಯಾಗಿ ಬಂದಿದ್ದಾರೆ. ಮತ್ತೆ ಎಲ್ಲೂ ಹೊರಗೆ ಕಾಣಿಸಲಿಲ್ಲ. ಆದರೆ ಬುಧವಾರ ಮನೆಯಿಂದ ವಾಸನೆ ಬರುತ್ತಿರುವುದಾಗಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಮೊದಲು ಇದು ಆತ್ಮಹತ್ಯೆ ಇರಬಹುದೆಂದು ಶಂಕಿಸಲಾಗಿತ್ತು.‌ ಆತ್ಮಹತ್ಯೆ ಇರಬಹುದು ಎನ್ನುವುದಕ್ಕೆ 2 ಕಾರಣಗಳಿವೆ. ಮೊದಲನೆಯದಾಗಿ, ಮಗ ದಿಲೀಪನನ್ನು ಪೊಲೀಸರು ಬಂಧಿಸಿರುವುದು, ಎರಡನೆಯದು ದಿಲೀಪನಿಗೆ ಮದುವೆ ಗೊತ್ತು ಮಾಡಿದ ಹಿನ್ನೆಲೆಯಲ್ಲಿ ಹೆಣ್ಣಿನ ಕಡೆಯವರ ಮನೆ ನೋಡಲು ಬರುವವರಿದ್ದರು. ಅವರಿಗೆ ಮುಖ ತೋರಿಸಲಾಗದೆ ಆತ್ಮಹತ್ಯೆ ಮಾಡಕೊಂಡಿರಬಹುದು ಎನ್ನಲಾಗಿತ್ತು. ಆದರೆ, ಮನೆಯ ಒಳಗೆ ಪ್ರವೇಶಿಸಿದ ಪೊಲೀಸರಿಗೆ ಸಂಶಯ ಹುಟ್ಟಿದೆ. ಮನೆಯೊಳಗಿನ‌ ವಾತಾವರಣವನ್ನು ನೋಡಿ ಇದು ಕೊಲೆಯಾಗಿರಬಹುದು ಎಂದು ಶಂಕಿಸಿ ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲಿಸುತ್ತಾರೆ. ಅವರು ಕೂಡ ಇದು ಕೊಲೆ ಎನ್ನುವುದಕ್ಕೆ ಸಾಕ್ಷಿಗಳನ್ನು ಪತ್ತೆ ಮಾಡುತ್ತಾರೆ. ನಂತರ ಪೊಸ್ಟ್ ಮಾರ್ಟಮ್ ನಡೆಸಿದಾಗ ಅದರ ವರದಿಯಲ್ಲಿ ಕೂಡ ಕೊಲೆಯ ಸಾಧ್ಯತೆ ಕಂಡು ಬಂದಿದೆ.ವಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾ ಶಂಕರ ಗುಳೇದ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಬುಧವಾರ ಮತ್ತು ಗುರುವಾರ ಅಥಣಿಗೆ ಭೇಟಿ ನೀಡಿ ತೀವ್ರ ತನಿಖೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು