11:23 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬೆಳಗಾವಿ: ಅಥಣಿ ಹೊರವಲಯದ ಮನೆಯಲ್ಲಿ ದಂಪತಿ ಶವ ಪತ್ತೆ: ಕೊಲೆ ಶಂಕೆ; ಚುರುಕುಗೊಂಡ ಪೊಲೀಸ್ ತನಿಖೆ

08/11/2024, 10:22

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚವ್ಹಾಣ ತೋಟದಲ್ಲಿ ದಂಪತಿಯ ಶವ ಪತ್ತೆಯಾಗಿದ್ದು, ಕೊಲೆಗೀಡಾಗಿರಬೇಕೆಂದು ಶಂಕಿಸಲಾಗಿದೆ.
ಚವ್ಹಾಣ ತೋಟದಲ್ಲಿನ ನಾನಾಸಾಹೇಬ ಚವ್ಹಾಣ (58) ಮತ್ತು ಜಯಶ್ರೀ ಚವ್ಹಾಣ (51) ದಂಪತಿ ನಿಗೂಢವಾಗಿ ಸಾವಿಗೀಡಾಗಿದವರು. ಈ ಮುನ್ನ ಇದನ್ನು‌ ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು.
ಸುಮಾರು 6 -7 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಸಾವಿಗೀಡಾದ ದಂಪತಿಯ ಪುತ್ರ ದಿಲೀಪ್ ದರೋಡೆ ಪ್ರಕರಣವೊಂದರಲ್ಲಿ ಜಮಖಂಡಿಯಲ್ಲಿ ಬಂಧಿಸಲ್ಪಟ್ಟಿದ್ದ. ಆತನನ್ನು ಬಿಡಿಸಲು ದಂಪತಿ 7-8 ದಿನಗಳ ಹಿಂದೆ ಜಮಖಂಡಿಗೆ ತೆರಳಿ ವಕೀಲರನ್ನು ಭೇಟಿಯಾಗಿ ಬಂದಿದ್ದಾರೆ. ಮತ್ತೆ ಎಲ್ಲೂ ಹೊರಗೆ ಕಾಣಿಸಲಿಲ್ಲ. ಆದರೆ ಬುಧವಾರ ಮನೆಯಿಂದ ವಾಸನೆ ಬರುತ್ತಿರುವುದಾಗಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಮೊದಲು ಇದು ಆತ್ಮಹತ್ಯೆ ಇರಬಹುದೆಂದು ಶಂಕಿಸಲಾಗಿತ್ತು.‌ ಆತ್ಮಹತ್ಯೆ ಇರಬಹುದು ಎನ್ನುವುದಕ್ಕೆ 2 ಕಾರಣಗಳಿವೆ. ಮೊದಲನೆಯದಾಗಿ, ಮಗ ದಿಲೀಪನನ್ನು ಪೊಲೀಸರು ಬಂಧಿಸಿರುವುದು, ಎರಡನೆಯದು ದಿಲೀಪನಿಗೆ ಮದುವೆ ಗೊತ್ತು ಮಾಡಿದ ಹಿನ್ನೆಲೆಯಲ್ಲಿ ಹೆಣ್ಣಿನ ಕಡೆಯವರ ಮನೆ ನೋಡಲು ಬರುವವರಿದ್ದರು. ಅವರಿಗೆ ಮುಖ ತೋರಿಸಲಾಗದೆ ಆತ್ಮಹತ್ಯೆ ಮಾಡಕೊಂಡಿರಬಹುದು ಎನ್ನಲಾಗಿತ್ತು. ಆದರೆ, ಮನೆಯ ಒಳಗೆ ಪ್ರವೇಶಿಸಿದ ಪೊಲೀಸರಿಗೆ ಸಂಶಯ ಹುಟ್ಟಿದೆ. ಮನೆಯೊಳಗಿನ‌ ವಾತಾವರಣವನ್ನು ನೋಡಿ ಇದು ಕೊಲೆಯಾಗಿರಬಹುದು ಎಂದು ಶಂಕಿಸಿ ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲಿಸುತ್ತಾರೆ. ಅವರು ಕೂಡ ಇದು ಕೊಲೆ ಎನ್ನುವುದಕ್ಕೆ ಸಾಕ್ಷಿಗಳನ್ನು ಪತ್ತೆ ಮಾಡುತ್ತಾರೆ. ನಂತರ ಪೊಸ್ಟ್ ಮಾರ್ಟಮ್ ನಡೆಸಿದಾಗ ಅದರ ವರದಿಯಲ್ಲಿ ಕೂಡ ಕೊಲೆಯ ಸಾಧ್ಯತೆ ಕಂಡು ಬಂದಿದೆ.ವಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾ ಶಂಕರ ಗುಳೇದ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಬುಧವಾರ ಮತ್ತು ಗುರುವಾರ ಅಥಣಿಗೆ ಭೇಟಿ ನೀಡಿ ತೀವ್ರ ತನಿಖೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು