8:50 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಬೆಳಗಾವಿ: ಅಥಣಿ ಹೊರವಲಯದ ಮನೆಯಲ್ಲಿ ದಂಪತಿ ಶವ ಪತ್ತೆ: ಕೊಲೆ ಶಂಕೆ; ಚುರುಕುಗೊಂಡ ಪೊಲೀಸ್ ತನಿಖೆ

08/11/2024, 10:22

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚವ್ಹಾಣ ತೋಟದಲ್ಲಿ ದಂಪತಿಯ ಶವ ಪತ್ತೆಯಾಗಿದ್ದು, ಕೊಲೆಗೀಡಾಗಿರಬೇಕೆಂದು ಶಂಕಿಸಲಾಗಿದೆ.
ಚವ್ಹಾಣ ತೋಟದಲ್ಲಿನ ನಾನಾಸಾಹೇಬ ಚವ್ಹಾಣ (58) ಮತ್ತು ಜಯಶ್ರೀ ಚವ್ಹಾಣ (51) ದಂಪತಿ ನಿಗೂಢವಾಗಿ ಸಾವಿಗೀಡಾಗಿದವರು. ಈ ಮುನ್ನ ಇದನ್ನು‌ ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು.
ಸುಮಾರು 6 -7 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಸಾವಿಗೀಡಾದ ದಂಪತಿಯ ಪುತ್ರ ದಿಲೀಪ್ ದರೋಡೆ ಪ್ರಕರಣವೊಂದರಲ್ಲಿ ಜಮಖಂಡಿಯಲ್ಲಿ ಬಂಧಿಸಲ್ಪಟ್ಟಿದ್ದ. ಆತನನ್ನು ಬಿಡಿಸಲು ದಂಪತಿ 7-8 ದಿನಗಳ ಹಿಂದೆ ಜಮಖಂಡಿಗೆ ತೆರಳಿ ವಕೀಲರನ್ನು ಭೇಟಿಯಾಗಿ ಬಂದಿದ್ದಾರೆ. ಮತ್ತೆ ಎಲ್ಲೂ ಹೊರಗೆ ಕಾಣಿಸಲಿಲ್ಲ. ಆದರೆ ಬುಧವಾರ ಮನೆಯಿಂದ ವಾಸನೆ ಬರುತ್ತಿರುವುದಾಗಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಮೊದಲು ಇದು ಆತ್ಮಹತ್ಯೆ ಇರಬಹುದೆಂದು ಶಂಕಿಸಲಾಗಿತ್ತು.‌ ಆತ್ಮಹತ್ಯೆ ಇರಬಹುದು ಎನ್ನುವುದಕ್ಕೆ 2 ಕಾರಣಗಳಿವೆ. ಮೊದಲನೆಯದಾಗಿ, ಮಗ ದಿಲೀಪನನ್ನು ಪೊಲೀಸರು ಬಂಧಿಸಿರುವುದು, ಎರಡನೆಯದು ದಿಲೀಪನಿಗೆ ಮದುವೆ ಗೊತ್ತು ಮಾಡಿದ ಹಿನ್ನೆಲೆಯಲ್ಲಿ ಹೆಣ್ಣಿನ ಕಡೆಯವರ ಮನೆ ನೋಡಲು ಬರುವವರಿದ್ದರು. ಅವರಿಗೆ ಮುಖ ತೋರಿಸಲಾಗದೆ ಆತ್ಮಹತ್ಯೆ ಮಾಡಕೊಂಡಿರಬಹುದು ಎನ್ನಲಾಗಿತ್ತು. ಆದರೆ, ಮನೆಯ ಒಳಗೆ ಪ್ರವೇಶಿಸಿದ ಪೊಲೀಸರಿಗೆ ಸಂಶಯ ಹುಟ್ಟಿದೆ. ಮನೆಯೊಳಗಿನ‌ ವಾತಾವರಣವನ್ನು ನೋಡಿ ಇದು ಕೊಲೆಯಾಗಿರಬಹುದು ಎಂದು ಶಂಕಿಸಿ ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲಿಸುತ್ತಾರೆ. ಅವರು ಕೂಡ ಇದು ಕೊಲೆ ಎನ್ನುವುದಕ್ಕೆ ಸಾಕ್ಷಿಗಳನ್ನು ಪತ್ತೆ ಮಾಡುತ್ತಾರೆ. ನಂತರ ಪೊಸ್ಟ್ ಮಾರ್ಟಮ್ ನಡೆಸಿದಾಗ ಅದರ ವರದಿಯಲ್ಲಿ ಕೂಡ ಕೊಲೆಯ ಸಾಧ್ಯತೆ ಕಂಡು ಬಂದಿದೆ.ವಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾ ಶಂಕರ ಗುಳೇದ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಬುಧವಾರ ಮತ್ತು ಗುರುವಾರ ಅಥಣಿಗೆ ಭೇಟಿ ನೀಡಿ ತೀವ್ರ ತನಿಖೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು