1:54 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಬೆಳಗಾವಿ: ಅಥಣಿ ಹೊರವಲಯದ ಮನೆಯಲ್ಲಿ ದಂಪತಿ ಶವ ಪತ್ತೆ: ಕೊಲೆ ಶಂಕೆ; ಚುರುಕುಗೊಂಡ ಪೊಲೀಸ್ ತನಿಖೆ

08/11/2024, 10:22

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚವ್ಹಾಣ ತೋಟದಲ್ಲಿ ದಂಪತಿಯ ಶವ ಪತ್ತೆಯಾಗಿದ್ದು, ಕೊಲೆಗೀಡಾಗಿರಬೇಕೆಂದು ಶಂಕಿಸಲಾಗಿದೆ.
ಚವ್ಹಾಣ ತೋಟದಲ್ಲಿನ ನಾನಾಸಾಹೇಬ ಚವ್ಹಾಣ (58) ಮತ್ತು ಜಯಶ್ರೀ ಚವ್ಹಾಣ (51) ದಂಪತಿ ನಿಗೂಢವಾಗಿ ಸಾವಿಗೀಡಾಗಿದವರು. ಈ ಮುನ್ನ ಇದನ್ನು‌ ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು.
ಸುಮಾರು 6 -7 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಸಾವಿಗೀಡಾದ ದಂಪತಿಯ ಪುತ್ರ ದಿಲೀಪ್ ದರೋಡೆ ಪ್ರಕರಣವೊಂದರಲ್ಲಿ ಜಮಖಂಡಿಯಲ್ಲಿ ಬಂಧಿಸಲ್ಪಟ್ಟಿದ್ದ. ಆತನನ್ನು ಬಿಡಿಸಲು ದಂಪತಿ 7-8 ದಿನಗಳ ಹಿಂದೆ ಜಮಖಂಡಿಗೆ ತೆರಳಿ ವಕೀಲರನ್ನು ಭೇಟಿಯಾಗಿ ಬಂದಿದ್ದಾರೆ. ಮತ್ತೆ ಎಲ್ಲೂ ಹೊರಗೆ ಕಾಣಿಸಲಿಲ್ಲ. ಆದರೆ ಬುಧವಾರ ಮನೆಯಿಂದ ವಾಸನೆ ಬರುತ್ತಿರುವುದಾಗಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಮೊದಲು ಇದು ಆತ್ಮಹತ್ಯೆ ಇರಬಹುದೆಂದು ಶಂಕಿಸಲಾಗಿತ್ತು.‌ ಆತ್ಮಹತ್ಯೆ ಇರಬಹುದು ಎನ್ನುವುದಕ್ಕೆ 2 ಕಾರಣಗಳಿವೆ. ಮೊದಲನೆಯದಾಗಿ, ಮಗ ದಿಲೀಪನನ್ನು ಪೊಲೀಸರು ಬಂಧಿಸಿರುವುದು, ಎರಡನೆಯದು ದಿಲೀಪನಿಗೆ ಮದುವೆ ಗೊತ್ತು ಮಾಡಿದ ಹಿನ್ನೆಲೆಯಲ್ಲಿ ಹೆಣ್ಣಿನ ಕಡೆಯವರ ಮನೆ ನೋಡಲು ಬರುವವರಿದ್ದರು. ಅವರಿಗೆ ಮುಖ ತೋರಿಸಲಾಗದೆ ಆತ್ಮಹತ್ಯೆ ಮಾಡಕೊಂಡಿರಬಹುದು ಎನ್ನಲಾಗಿತ್ತು. ಆದರೆ, ಮನೆಯ ಒಳಗೆ ಪ್ರವೇಶಿಸಿದ ಪೊಲೀಸರಿಗೆ ಸಂಶಯ ಹುಟ್ಟಿದೆ. ಮನೆಯೊಳಗಿನ‌ ವಾತಾವರಣವನ್ನು ನೋಡಿ ಇದು ಕೊಲೆಯಾಗಿರಬಹುದು ಎಂದು ಶಂಕಿಸಿ ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲಿಸುತ್ತಾರೆ. ಅವರು ಕೂಡ ಇದು ಕೊಲೆ ಎನ್ನುವುದಕ್ಕೆ ಸಾಕ್ಷಿಗಳನ್ನು ಪತ್ತೆ ಮಾಡುತ್ತಾರೆ. ನಂತರ ಪೊಸ್ಟ್ ಮಾರ್ಟಮ್ ನಡೆಸಿದಾಗ ಅದರ ವರದಿಯಲ್ಲಿ ಕೂಡ ಕೊಲೆಯ ಸಾಧ್ಯತೆ ಕಂಡು ಬಂದಿದೆ.ವಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾ ಶಂಕರ ಗುಳೇದ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಬುಧವಾರ ಮತ್ತು ಗುರುವಾರ ಅಥಣಿಗೆ ಭೇಟಿ ನೀಡಿ ತೀವ್ರ ತನಿಖೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು