4:00 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಾಡಿನ ಕಲೆ, ಸಾಹಿತ್ಯದ ಬಗ್ಗೆ ತಿಳುವಳಿಕೆ ಮೂಡಿದಾಗ ಮಾತ್ರ ಮಕ್ಕಳಲ್ಲಿ ಪರಿಪೂರ್ಣತೆ ಬರಲು ಸಾಧ್ಯ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

08/11/2024, 11:27

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಸಮಾಜದಲ್ಲಿ ವಿದ್ಯಾವಂತರಿಂದಲೇ ಹೆಚ್ಚು ಅಪರಾಧಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ತಾಲೂಕಿನ ಬೊಬ್ಬಿ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದ ಅವರು ಅಂಕ ಗಳಿಸುವುದು ಪದವಿ
ಪಡೆಯುವುದು ಮಾತ್ರ ಶಿಕ್ಷಣವಲ್ಲ.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಆಗಬೇಕು. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅರಿವು ಮೂಡಬೇಕು. ನಾಡಿನ ಕಲೆ, ಸಾಹಿತ್ಯದ ಬಗ್ಗೆ ತಿಳುವಳಿಕೆ ಮೂಡಿದಾಗ ಮಾತ್ರ ಮಕ್ಕಳಲ್ಲಿ ಪರಿಪೂರ್ಣತೆ ಬರಲು ಸಾಧ್ಯ ಎಂದರು.
ಹೆಚ್ಚು ಓದಿದ ಮಾತ್ರಕ್ಕೆ ಬಲಾಡ್ಯ ದೇಹದಾಡ್ಯತೆ ಹೊಂದಿದ ಮಾತ್ರಕ್ಕೆ ವ್ಯಕ್ತಿತ್ವದಲ್ಲಿ ಪರಿಪೂರ್ಣತೆ ಬರಲು ಸಾಧ್ಯವಿಲ್ಲ. ಒಳ್ಳೆಯ ಸಂಸ್ಕಾರ ಸಣ್ಣ ವಯಸ್ಸಿನಲ್ಲೇ ಮಕ್ಕಳಿಗೆ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಗಳು ಹೆಚ್ಚು ಉಪಯುಕ್ತವಾಗಿವೆ. ಮಕ್ಕಳು, ಪೋಷಕರು, ಅಧ್ಯಾಪಕರು ಪ್ರತಿಭಾ ಕಾರಂಜಿಗಳಲ್ಲಿ ಹೆಚ್ಚು ತೊಗಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಎಸ್‌.ಡಿ.ಎಂ.ಸಿ. ಅಧ್ಯಕ್ಷರಾದ ಗಣೇಶ್‌ ವಹಿಸಿದ್ದರು. ಸಭೆಯಲ್ಲಿ
ಪಂಚಾಯ್ತಿ ಅಧ್ಯಕ್ಷರಾದ ಕವಿತಾ ಭಾಸ್ಕರ್, ಸದಸ್ಯರಾದ ಸುಂದರೇಶ್, ನಾಗರಾಜ, ಶ್ರೀನಿವಾಸ ಗೌಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು