12:05 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಸುಳ್ಳು ಮಾಹಿತಿ ಹರಡಿದ ಆರೋಪ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ ಎಫ್​ಐಆರ್ ದಾಖಲು

08/11/2024, 13:00

ಹಾವೇರಿ(reporterjarnataka.com): ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.
ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸಂಸದರು ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದರು. ಹರನಗೇರಿ ರೈತ‌ ರುದ್ರಪ್ಪ ಆತ್ಮಹತ್ಯೆ ಬಗ್ಗೆ ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ, ವಕ್ಫ್​​ ನೋಟಿಸ್​ಗೆ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬರೆದಿದ್ದರು. ರಾಜ್ಯದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ ಸಂಸದರು ಟ್ವೀಟ್ ಮಾಡಿದ್ದರು.
ರೈತ‌ ರುದ್ರಪ್ಪ ಅವರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮ ವರದಿಯೊಂದನ್ನು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಬರೆದಿದ್ದರು. ಈ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಇದೀಗ ಈ ಟ್ವೀಟ್​ ಅನ್ನು ಅಳಿಸಿಹಾಕಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು