3:40 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಗೆ ಸೋಲುವ ಭೀತಿ ಎದುರಾಗಿದೆ; 20 ದಿನದೊಳಗೆ ಮುಖ್ಯಮಂತ್ರಿ ರಾಜೀನಾಮೆ: ಸಂಡೂರಿನಲ್ಲಿ ಯಡಿಯೂರಪ್ಪ

08/11/2024, 19:12

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕಾಂಗ್ರೆಸ್ ಗೆ ಸೋಲುವ ಭೀತಿ ಬಂದಿದೆ.‌ ಮುಡಾ ಹಗರಣದಲ್ಲಿ ಸಿಎಂ ಸಿಲುಕಿ ಒದ್ದಾಡ್ತಿದ್ದಾರೆ. 15-20 ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಹೇಳಿದರು.
ಶುಕ್ರವಾರ ಸಂಡೂರಿನ ಚೋರನೂರು‌ ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಪ್ರಚಾರದ ವೇಳೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ, ನಾಳೆಯೂ ನಾನು ಸಂಡೂರಿನಲ್ಲೇ ಇರ್ತಿನಿ ಮೋದಿಯವರ ವರ್ಚಸ್ಸು ನಮಗೆ ಅನುಕೂಲವಾಗಲಿದೆ.ಸಂಸದ ತೇಜಸ್ವಿ ಸೂರ್ಯ ಅವರ ಮೇಲೆ ಎಫ್ಐಆರ್ ಆಗಿದೆ, ಆಗಲಿ ಬಿಡಿ ಎದುರಿಸೋಣ ಎಂದರು.
ಮೂರು ವಿಧಾನ ಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಚಾರ ಮಾಡ್ತಿದ್ದೇನೆ. ಸಂಡೂರಿನಲ್ಲಿ ನಿರೀಕ್ಷೆ ಮೀರಿ ಬೆಂಬಲ ಸಿಗುತ್ತಿದ್ದು, ಜನಾರ್ದನ ರೆಡ್ಡಿ- ಶ್ರೀರಾಮುಲು ಜೋಡಿ ಅಭ್ಯರ್ಥಿಗೆ ಹೆಚ್ಚು ಶಕ್ತಿ ನೀಡಿದೆ ಎಂದು ಹೇಳಿದರು.

ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ, ಸಿಎಂ ಸಿದ್ದರಾಮಯ್ಯ ‌ ಸೇರಿ, ಕ್ಯಾಬಿನೆಟ್ ಇಲ್ಲೇ ಇದೆ ಎಂಬ ವಿಚಾರ ಅದನ್ನು ನೀವೇ ಅರ್ಥ ಮಾಡಿಕೊಳ್ಳಿ. ಮುಡಾ ಹಗರಣ ಆರೋಪ ಸಾಬಿತಾಗ್ತದೆ ಅಂತ ಇಡಿ, ಸಿಬಿಐ ಮೇಲೆ ಸಿಎಂ ಸಿದ್ದರಾಮಯ್ಯ ಅಪಪ್ರಚಾರ ಮಾಡ್ತಿದಾರೆ. ಸಿಬಿಐ ಎಫ್ಐಆರ್ ಮಾಡಬೇಕು, ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ವಕ್ಪ್ ಬೋರ್ಡ್ ವಿಚಾರದಲ್ಲಿ ಜಂಟಿ ಸದನ ಸಮಿತಿ ತನ್ನ ಕೆಲಸ ಮಾಡ್ತಿದೆ ವಕ್ಪ್ , ಮುಡಾ ವಿಚಾರದಲ್ಲಿ ಅವರಿಗೆ ಆರೋಪ ಸಾಬಿತಾಗುತ್ತದೆ , ಅವರಿಗೆ ಭಯ ಶುರುವಾಗಿದೆ ಎಂದು ಅವರು ನುಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ವಿ.ಸುನೀಲ್ ಕುಮಾರ, ಭೈರತಿ ಬಸವರಾಜ, ಸತೀಶ ರೆಡ್ಡಿ, ಆಂಧ್ರ ಪ್ರದೇಶದ ಶಾಸಕರಾದ ಸುಧಾಕರ ರೆಡ್ಡಿ, ಮಾಜಿ ಶಾಸಕರಾದ ರೇಣುಕಾಚಾರ್ಯ, ತಿಪ್ಪೇಸ್ವಾಮಿ, ರಾಮಚಂದ್ರ ರೆಡ್ಡಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ, ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಕೆ.ಎಸ್.ದಿವಾಕರ, ಎಸ್.ಸಿ.ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಕೌತಾಳ, ಹಿರಿಯರಾದ ಟಿ.ಕೃಷ್ಣಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು