6:12 AM Wednesday22 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಗೆ ಸೋಲುವ ಭೀತಿ ಎದುರಾಗಿದೆ; 20 ದಿನದೊಳಗೆ ಮುಖ್ಯಮಂತ್ರಿ ರಾಜೀನಾಮೆ: ಸಂಡೂರಿನಲ್ಲಿ ಯಡಿಯೂರಪ್ಪ

08/11/2024, 19:12

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕಾಂಗ್ರೆಸ್ ಗೆ ಸೋಲುವ ಭೀತಿ ಬಂದಿದೆ.‌ ಮುಡಾ ಹಗರಣದಲ್ಲಿ ಸಿಎಂ ಸಿಲುಕಿ ಒದ್ದಾಡ್ತಿದ್ದಾರೆ. 15-20 ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಹೇಳಿದರು.
ಶುಕ್ರವಾರ ಸಂಡೂರಿನ ಚೋರನೂರು‌ ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಪ್ರಚಾರದ ವೇಳೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ, ನಾಳೆಯೂ ನಾನು ಸಂಡೂರಿನಲ್ಲೇ ಇರ್ತಿನಿ ಮೋದಿಯವರ ವರ್ಚಸ್ಸು ನಮಗೆ ಅನುಕೂಲವಾಗಲಿದೆ.ಸಂಸದ ತೇಜಸ್ವಿ ಸೂರ್ಯ ಅವರ ಮೇಲೆ ಎಫ್ಐಆರ್ ಆಗಿದೆ, ಆಗಲಿ ಬಿಡಿ ಎದುರಿಸೋಣ ಎಂದರು.
ಮೂರು ವಿಧಾನ ಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಚಾರ ಮಾಡ್ತಿದ್ದೇನೆ. ಸಂಡೂರಿನಲ್ಲಿ ನಿರೀಕ್ಷೆ ಮೀರಿ ಬೆಂಬಲ ಸಿಗುತ್ತಿದ್ದು, ಜನಾರ್ದನ ರೆಡ್ಡಿ- ಶ್ರೀರಾಮುಲು ಜೋಡಿ ಅಭ್ಯರ್ಥಿಗೆ ಹೆಚ್ಚು ಶಕ್ತಿ ನೀಡಿದೆ ಎಂದು ಹೇಳಿದರು.

ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ, ಸಿಎಂ ಸಿದ್ದರಾಮಯ್ಯ ‌ ಸೇರಿ, ಕ್ಯಾಬಿನೆಟ್ ಇಲ್ಲೇ ಇದೆ ಎಂಬ ವಿಚಾರ ಅದನ್ನು ನೀವೇ ಅರ್ಥ ಮಾಡಿಕೊಳ್ಳಿ. ಮುಡಾ ಹಗರಣ ಆರೋಪ ಸಾಬಿತಾಗ್ತದೆ ಅಂತ ಇಡಿ, ಸಿಬಿಐ ಮೇಲೆ ಸಿಎಂ ಸಿದ್ದರಾಮಯ್ಯ ಅಪಪ್ರಚಾರ ಮಾಡ್ತಿದಾರೆ. ಸಿಬಿಐ ಎಫ್ಐಆರ್ ಮಾಡಬೇಕು, ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ವಕ್ಪ್ ಬೋರ್ಡ್ ವಿಚಾರದಲ್ಲಿ ಜಂಟಿ ಸದನ ಸಮಿತಿ ತನ್ನ ಕೆಲಸ ಮಾಡ್ತಿದೆ ವಕ್ಪ್ , ಮುಡಾ ವಿಚಾರದಲ್ಲಿ ಅವರಿಗೆ ಆರೋಪ ಸಾಬಿತಾಗುತ್ತದೆ , ಅವರಿಗೆ ಭಯ ಶುರುವಾಗಿದೆ ಎಂದು ಅವರು ನುಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ವಿ.ಸುನೀಲ್ ಕುಮಾರ, ಭೈರತಿ ಬಸವರಾಜ, ಸತೀಶ ರೆಡ್ಡಿ, ಆಂಧ್ರ ಪ್ರದೇಶದ ಶಾಸಕರಾದ ಸುಧಾಕರ ರೆಡ್ಡಿ, ಮಾಜಿ ಶಾಸಕರಾದ ರೇಣುಕಾಚಾರ್ಯ, ತಿಪ್ಪೇಸ್ವಾಮಿ, ರಾಮಚಂದ್ರ ರೆಡ್ಡಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ, ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಕೆ.ಎಸ್.ದಿವಾಕರ, ಎಸ್.ಸಿ.ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಕೌತಾಳ, ಹಿರಿಯರಾದ ಟಿ.ಕೃಷ್ಣಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು