12:33 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಗೆ ಸೋಲುವ ಭೀತಿ ಎದುರಾಗಿದೆ; 20 ದಿನದೊಳಗೆ ಮುಖ್ಯಮಂತ್ರಿ ರಾಜೀನಾಮೆ: ಸಂಡೂರಿನಲ್ಲಿ ಯಡಿಯೂರಪ್ಪ

08/11/2024, 19:12

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕಾಂಗ್ರೆಸ್ ಗೆ ಸೋಲುವ ಭೀತಿ ಬಂದಿದೆ.‌ ಮುಡಾ ಹಗರಣದಲ್ಲಿ ಸಿಎಂ ಸಿಲುಕಿ ಒದ್ದಾಡ್ತಿದ್ದಾರೆ. 15-20 ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಹೇಳಿದರು.
ಶುಕ್ರವಾರ ಸಂಡೂರಿನ ಚೋರನೂರು‌ ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಪ್ರಚಾರದ ವೇಳೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ, ನಾಳೆಯೂ ನಾನು ಸಂಡೂರಿನಲ್ಲೇ ಇರ್ತಿನಿ ಮೋದಿಯವರ ವರ್ಚಸ್ಸು ನಮಗೆ ಅನುಕೂಲವಾಗಲಿದೆ.ಸಂಸದ ತೇಜಸ್ವಿ ಸೂರ್ಯ ಅವರ ಮೇಲೆ ಎಫ್ಐಆರ್ ಆಗಿದೆ, ಆಗಲಿ ಬಿಡಿ ಎದುರಿಸೋಣ ಎಂದರು.
ಮೂರು ವಿಧಾನ ಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಚಾರ ಮಾಡ್ತಿದ್ದೇನೆ. ಸಂಡೂರಿನಲ್ಲಿ ನಿರೀಕ್ಷೆ ಮೀರಿ ಬೆಂಬಲ ಸಿಗುತ್ತಿದ್ದು, ಜನಾರ್ದನ ರೆಡ್ಡಿ- ಶ್ರೀರಾಮುಲು ಜೋಡಿ ಅಭ್ಯರ್ಥಿಗೆ ಹೆಚ್ಚು ಶಕ್ತಿ ನೀಡಿದೆ ಎಂದು ಹೇಳಿದರು.

ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ, ಸಿಎಂ ಸಿದ್ದರಾಮಯ್ಯ ‌ ಸೇರಿ, ಕ್ಯಾಬಿನೆಟ್ ಇಲ್ಲೇ ಇದೆ ಎಂಬ ವಿಚಾರ ಅದನ್ನು ನೀವೇ ಅರ್ಥ ಮಾಡಿಕೊಳ್ಳಿ. ಮುಡಾ ಹಗರಣ ಆರೋಪ ಸಾಬಿತಾಗ್ತದೆ ಅಂತ ಇಡಿ, ಸಿಬಿಐ ಮೇಲೆ ಸಿಎಂ ಸಿದ್ದರಾಮಯ್ಯ ಅಪಪ್ರಚಾರ ಮಾಡ್ತಿದಾರೆ. ಸಿಬಿಐ ಎಫ್ಐಆರ್ ಮಾಡಬೇಕು, ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ವಕ್ಪ್ ಬೋರ್ಡ್ ವಿಚಾರದಲ್ಲಿ ಜಂಟಿ ಸದನ ಸಮಿತಿ ತನ್ನ ಕೆಲಸ ಮಾಡ್ತಿದೆ ವಕ್ಪ್ , ಮುಡಾ ವಿಚಾರದಲ್ಲಿ ಅವರಿಗೆ ಆರೋಪ ಸಾಬಿತಾಗುತ್ತದೆ , ಅವರಿಗೆ ಭಯ ಶುರುವಾಗಿದೆ ಎಂದು ಅವರು ನುಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ವಿ.ಸುನೀಲ್ ಕುಮಾರ, ಭೈರತಿ ಬಸವರಾಜ, ಸತೀಶ ರೆಡ್ಡಿ, ಆಂಧ್ರ ಪ್ರದೇಶದ ಶಾಸಕರಾದ ಸುಧಾಕರ ರೆಡ್ಡಿ, ಮಾಜಿ ಶಾಸಕರಾದ ರೇಣುಕಾಚಾರ್ಯ, ತಿಪ್ಪೇಸ್ವಾಮಿ, ರಾಮಚಂದ್ರ ರೆಡ್ಡಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ, ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಕೆ.ಎಸ್.ದಿವಾಕರ, ಎಸ್.ಸಿ.ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಕೌತಾಳ, ಹಿರಿಯರಾದ ಟಿ.ಕೃಷ್ಣಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು