1:58 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಗೆ ಸೋಲುವ ಭೀತಿ ಎದುರಾಗಿದೆ; 20 ದಿನದೊಳಗೆ ಮುಖ್ಯಮಂತ್ರಿ ರಾಜೀನಾಮೆ: ಸಂಡೂರಿನಲ್ಲಿ ಯಡಿಯೂರಪ್ಪ

08/11/2024, 19:12

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕಾಂಗ್ರೆಸ್ ಗೆ ಸೋಲುವ ಭೀತಿ ಬಂದಿದೆ.‌ ಮುಡಾ ಹಗರಣದಲ್ಲಿ ಸಿಎಂ ಸಿಲುಕಿ ಒದ್ದಾಡ್ತಿದ್ದಾರೆ. 15-20 ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಹೇಳಿದರು.
ಶುಕ್ರವಾರ ಸಂಡೂರಿನ ಚೋರನೂರು‌ ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಪ್ರಚಾರದ ವೇಳೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ, ನಾಳೆಯೂ ನಾನು ಸಂಡೂರಿನಲ್ಲೇ ಇರ್ತಿನಿ ಮೋದಿಯವರ ವರ್ಚಸ್ಸು ನಮಗೆ ಅನುಕೂಲವಾಗಲಿದೆ.ಸಂಸದ ತೇಜಸ್ವಿ ಸೂರ್ಯ ಅವರ ಮೇಲೆ ಎಫ್ಐಆರ್ ಆಗಿದೆ, ಆಗಲಿ ಬಿಡಿ ಎದುರಿಸೋಣ ಎಂದರು.
ಮೂರು ವಿಧಾನ ಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಚಾರ ಮಾಡ್ತಿದ್ದೇನೆ. ಸಂಡೂರಿನಲ್ಲಿ ನಿರೀಕ್ಷೆ ಮೀರಿ ಬೆಂಬಲ ಸಿಗುತ್ತಿದ್ದು, ಜನಾರ್ದನ ರೆಡ್ಡಿ- ಶ್ರೀರಾಮುಲು ಜೋಡಿ ಅಭ್ಯರ್ಥಿಗೆ ಹೆಚ್ಚು ಶಕ್ತಿ ನೀಡಿದೆ ಎಂದು ಹೇಳಿದರು.

ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ, ಸಿಎಂ ಸಿದ್ದರಾಮಯ್ಯ ‌ ಸೇರಿ, ಕ್ಯಾಬಿನೆಟ್ ಇಲ್ಲೇ ಇದೆ ಎಂಬ ವಿಚಾರ ಅದನ್ನು ನೀವೇ ಅರ್ಥ ಮಾಡಿಕೊಳ್ಳಿ. ಮುಡಾ ಹಗರಣ ಆರೋಪ ಸಾಬಿತಾಗ್ತದೆ ಅಂತ ಇಡಿ, ಸಿಬಿಐ ಮೇಲೆ ಸಿಎಂ ಸಿದ್ದರಾಮಯ್ಯ ಅಪಪ್ರಚಾರ ಮಾಡ್ತಿದಾರೆ. ಸಿಬಿಐ ಎಫ್ಐಆರ್ ಮಾಡಬೇಕು, ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ವಕ್ಪ್ ಬೋರ್ಡ್ ವಿಚಾರದಲ್ಲಿ ಜಂಟಿ ಸದನ ಸಮಿತಿ ತನ್ನ ಕೆಲಸ ಮಾಡ್ತಿದೆ ವಕ್ಪ್ , ಮುಡಾ ವಿಚಾರದಲ್ಲಿ ಅವರಿಗೆ ಆರೋಪ ಸಾಬಿತಾಗುತ್ತದೆ , ಅವರಿಗೆ ಭಯ ಶುರುವಾಗಿದೆ ಎಂದು ಅವರು ನುಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ವಿ.ಸುನೀಲ್ ಕುಮಾರ, ಭೈರತಿ ಬಸವರಾಜ, ಸತೀಶ ರೆಡ್ಡಿ, ಆಂಧ್ರ ಪ್ರದೇಶದ ಶಾಸಕರಾದ ಸುಧಾಕರ ರೆಡ್ಡಿ, ಮಾಜಿ ಶಾಸಕರಾದ ರೇಣುಕಾಚಾರ್ಯ, ತಿಪ್ಪೇಸ್ವಾಮಿ, ರಾಮಚಂದ್ರ ರೆಡ್ಡಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ, ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಕೆ.ಎಸ್.ದಿವಾಕರ, ಎಸ್.ಸಿ.ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಕೌತಾಳ, ಹಿರಿಯರಾದ ಟಿ.ಕೃಷ್ಣಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು