12:37 AM Saturday7 - June 2025
ಬ್ರೇಕಿಂಗ್ ನ್ಯೂಸ್
ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ…

ಇತ್ತೀಚಿನ ಸುದ್ದಿ

ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ

09/11/2024, 16:08

ಮಂಗಳೂರು(reporter Karnataka.com): ವೆನ್‍ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ತಜ್ಞ ವೈದ್ಯ ಡಾ ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯಾರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು. ಡಾ ಅರ್ಜುನ್ ಶೆಟ್ಟಿ ತಂಡವು ಮೆದುಳಲ್ಲಿ ರಕ್ತ ಹೆಪ್ಪು ಗಟ್ಟಿದ ರೋಗಿಗೆ ತುರ್ತು ಶಸ್ತ್ರ ಚಿಕಿತ್ಸೆ ಮಾಡಿದರು. ಡಾ ಸುರೇಶ ಭಟ್ ಅರವಳಿಕೆ ತಂಡದ ಮುಖ್ಯಸ್ಥರಾಗಿದ್ದು ಎಲ್ಲಾ ಶಸ್ತ್ರ ಚಿಕಿತ್ಸೆ ಯಾವುದೇ ತೊಂದರೆ ಆಗದ ಹಾಗೆ ನೆರವೇರಿಸಿದರು.
ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ನಸಿರ್ಂಗ್ ಅಧಿಕಾರಿಗಳಾದ ಶೈಲಾ, ಜೇಸಿಂತ, ಅಶ್ವಿನಿ, ರೇಷ್ಮಾ, ಅಲ್ವನ ಮೆನೇಜ್ಸ್ ಇದ್ದರು. ಓಟಿ ಟೆಕ್ನಿಷಿಯನ್‍ಗಳಾದ ಧನುಷ್, ಶ್ರದ್ದಾ, ಹೇಮಾಶ್ರೀ, ಅರ್ಪಿತಾ, ಪ್ರದೀಪ್ ಹಾಗೂ ಡಿ ಗ್ರೂಪ್ ನೌಕರರಾದ ಜಯಪ್ರಕಾಶ್ ಮತ್ತು ಹರೀಶ್ ಉಪಸ್ಥಿತರಿದ್ದರು.
ಡಿಸೆಂಬರ್ 1ರಿಂದ ಶಸ್ತ್ರ ಚಿಕಿತ್ಸಾ ಹಾಗೂ ಮೂಳೆ ವಿಭಾಗದ ಶಸ್ತ್ರ ಚಿಕಿತ್ಸಾ ಕೊಠಡಿ ಪ್ರಾರಂಭವಾಗಲಿದ್ದು, ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ವಾರ್ಡ್‍ಗಳು ಈ ಭಾಗದ ಬಡವರಿಗೆ ವರದಾನ ಆಗಲಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು