12:53 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ

09/11/2024, 16:08

ಮಂಗಳೂರು(reporter Karnataka.com): ವೆನ್‍ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ತಜ್ಞ ವೈದ್ಯ ಡಾ ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯಾರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು. ಡಾ ಅರ್ಜುನ್ ಶೆಟ್ಟಿ ತಂಡವು ಮೆದುಳಲ್ಲಿ ರಕ್ತ ಹೆಪ್ಪು ಗಟ್ಟಿದ ರೋಗಿಗೆ ತುರ್ತು ಶಸ್ತ್ರ ಚಿಕಿತ್ಸೆ ಮಾಡಿದರು. ಡಾ ಸುರೇಶ ಭಟ್ ಅರವಳಿಕೆ ತಂಡದ ಮುಖ್ಯಸ್ಥರಾಗಿದ್ದು ಎಲ್ಲಾ ಶಸ್ತ್ರ ಚಿಕಿತ್ಸೆ ಯಾವುದೇ ತೊಂದರೆ ಆಗದ ಹಾಗೆ ನೆರವೇರಿಸಿದರು.
ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ನಸಿರ್ಂಗ್ ಅಧಿಕಾರಿಗಳಾದ ಶೈಲಾ, ಜೇಸಿಂತ, ಅಶ್ವಿನಿ, ರೇಷ್ಮಾ, ಅಲ್ವನ ಮೆನೇಜ್ಸ್ ಇದ್ದರು. ಓಟಿ ಟೆಕ್ನಿಷಿಯನ್‍ಗಳಾದ ಧನುಷ್, ಶ್ರದ್ದಾ, ಹೇಮಾಶ್ರೀ, ಅರ್ಪಿತಾ, ಪ್ರದೀಪ್ ಹಾಗೂ ಡಿ ಗ್ರೂಪ್ ನೌಕರರಾದ ಜಯಪ್ರಕಾಶ್ ಮತ್ತು ಹರೀಶ್ ಉಪಸ್ಥಿತರಿದ್ದರು.
ಡಿಸೆಂಬರ್ 1ರಿಂದ ಶಸ್ತ್ರ ಚಿಕಿತ್ಸಾ ಹಾಗೂ ಮೂಳೆ ವಿಭಾಗದ ಶಸ್ತ್ರ ಚಿಕಿತ್ಸಾ ಕೊಠಡಿ ಪ್ರಾರಂಭವಾಗಲಿದ್ದು, ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ವಾರ್ಡ್‍ಗಳು ಈ ಭಾಗದ ಬಡವರಿಗೆ ವರದಾನ ಆಗಲಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು