3:37 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಿಪಿಎಲ್ ಕಾರ್ಡ್ ರದ್ದು ಸೇರಿದಂತೆ ರೇಷನ್ ಕಾರ್ಡ್ ಅವ್ಯವಸ್ಥೆಯನ್ನು ವಿರೋಧಿಸಿ ಸಿಪಿಎಂ ಪ್ರತಿಭಟನೆ

09/11/2024, 16:31

ಮಂಗಳೂರು(reporterkarnataka.com):ಪಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಲು ಆದ ವಿಳಂಬಕ್ಕೆ ದಂಡ ಕಟ್ಟಿದ ಅಸಂಖ್ಯಾತ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿರುವ ಕ್ರಮವನ್ನು ಕೂಡಲೇ ವಾಪಸ್ ಪಡೆಯಬೇಕು, ರದ್ದುಗೊಳಿಸಿರುವ ಬಿಪಿಎಲ್ ಕಾರ್ಡ್ ಗಳನ್ನು ಕೂಡಲೇ ವಾಪಸ್ ನೀಡಬೇಕು,ರೇಷನ್ ಕಾರ್ಡ್ ನಲ್ಲಿರುವ ಹಲವಾರು ಗೊಂದಲ, ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸಬೇಕೆಂದು ಒತ್ತಾಯಿಸಿ ಸಿಪಿಎಂ ಉಳ್ಳಾಲ ಹಾಗೂ ಮುಡಿಪು ವಲಯ ಸಮಿತಿಗಳ ಜಂಟಿ ನೇತ್ರತ್ವದಲ್ಲಿ ನಾಟೆಕಲ್ ನಲ್ಲಿರುವ ಉಳ್ಳಾಲ ತಾಲೂಕು ಕಚೇರಿಯೆದುರು ಪ್ರತಿಭಟನೆ ನಡೆಸಲಾಯಿತು.

ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಜ್ಞಾಪೂರ್ವಕವಾಗಿ ನಾಶಪಡಿಸಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶಭರಿತರಾಗಿ ಘೋಷಣೆ ಕೂಗಿದರು.
ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಪಿಐ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೋಟ್ಟು, ಕೇಂದ್ರ ಸರ್ಕಾರ,ಈ ಹಿಂದೆ ಬಿಪಿಎಲ್ ಕಾರ್ಡ್ ಪರಿಶೀಲನೆಗೆ, ಪ್ಯಾನ್ ನಂಬರ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಆದೇಶ ನೀಡಿತ್ತು. ಜನರಿಗೆ ಇದರ ಕುರಿತು ಸರಿಯಾದ ಮಾಹಿತಿ ಇಲ್ಲದ್ದರಿಂದ ನಿಗದಿತ ಗಡುವಿನೊಳಗೆ ಆಧಾರ್ ಲಿಂಕ್ ಮಾಡಲು ಸಾಧ್ಯವಾಗಲಿಲ್ಲ. ಅದನ್ನು ದಂಡನೆಗೊಳಪಡಿಸಲು ಕೇಂದ್ರ ಸರಕಾರ ನಿರ್ಧರಿಸಿ ದಂಡ ವಿಧಿಸಿತು. ತಡವಾಗಿ ಲಿಂಕ್ ಮಾಡಿದವರು ಆದಾಯ ತೆರಿಗೆ ಇಲಾಖೆಗೆ ಒಂದು ಸಾವಿರ ರೂ ದಂಡ ಪಾವತಿಸಿದ್ದರು ಮತ್ತು ಇದನ್ನು ಕೇಂದ್ರ ಸರಕಾರದ ಆದಾಯ ತೆರಿಗೆ ಇಲಾಖೆ ದಂಡವನ್ನೇ ಆದಾಯವೆಂದು ಪರಿಗಣಿಸಿತು. ಇದು ಬಡವರನ್ನು ಸೌಲಭ್ಯದಿಂದ ಹೊರದೂಡಲು ನೆರವಾಯಿತು. ಕೇಂದ್ರ ಸರಕಾರದ ಈ ನಡೆ ಸ್ಪಷ್ಟವಾಗಿ ಜನ ವಿರೋಧಿಯಾಗಿದೆ. ಬಡವರನ್ನು ಸೌಲಭ್ಯದಿಂದ ಹೊರಗಿಡುವ ತಂತ್ರದ ಭಾಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಪಿಎಂ ಉಳ್ಳಾಲ ವಲಯ ಸಮಿತಿಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ಇತ್ತೀಚೆಗೆ, ರಾಜ್ಯದ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯು ಬಿಪಿಎಲ್ ಕಾರ್ಡಗಳ ಆರ್ಹತೆ ಪರಿಶೀಲನೆಗೆ ಕ್ರಮವಹಿಸಿ, ಪ್ಯಾನ್ ನಂಬರ್ ಗೆ ಆಧಾರ್ ನಂಬರ್ ಲಿಂಕ್ ವಿಳಂಬಕ್ಕೆ ಆದಾಯ ತೆರಿಗೆ ಇಲಾಖೆಗೆ ದಂಡ ಪಾವತಿಸಿದ್ದ ರಾಜ್ಯದ ಬಿಪಿಎಲ್ ಕಾರ್ಡ್ ಕುಟುಂಬಗಳನ್ನು ಈ ಇಲಾಖೆಯು ಸರಿಯಾಗಿ ಗಮನಿಸದೆ, ಆದಾಯ ತೆರಿಗೆ ಪಾವತಿದಾರರ ಪಟ್ಟಿಗೆ ಸೇರಿಸಿತಲ್ಲದೆ, ರಾಜ್ಯದ ಸುಮಾರು ಒಂದು ಲಕ್ಷಕ್ಕೂ ಅಧಿಕ ಕಾರ್ಡಗಳನ್ನು ಅವಸರದಲ್ಲಿ ಕಡಿತ ಮಾಡಿತು. ಇದು ಮತ್ತೊಂದು ದೊಡ್ಡ ತಪ್ಪಾದ ನಡೆಯಾಗಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಿಪಿಎಂ ಮುಡಿಪು ವಲಯ ಸಮಿತಿ ಕಾರ್ಯದರ್ಶಿ ರಫೀಕ್ ಹರೇಕಳರವರು, ರಾಜ್ಯದ ಅಪಾರ ಸಂಖ್ಯೆಯ ನೈಜ ಬಿಪಿಎಲ್ ಕಾರ್ಡದಾರರು ತೊಂದರೆಗೊಳಗಾಗಿದ್ದಾರೆ. ಸರಕಾರದ ಯಾವುದೇ ಸಹಾಯ/ ಸೌಲಭ್ಯ ಪಡೆಯಲು ಬಿಪಿಎಲ್ ಕಾರ್ಡ್ ತೋರುವುದು ಮಾನದಂಡವಾಗಿರುವುದರಿಂದ ಈ ದುರುದ್ದೇಶ ಪೂರಿತ ಅವಸರದ ತಪ್ಪಾದ ನಡೆಯು ಅವರನ್ನು ಅನೇಕ ಸೌಲಭ್ಯಗಳಿಂದ ವಂಚಿತರನ್ನಾಗಿಸಿದೆ ಎಂದು ಹೇಳಿದರು.
ಪ್ರತಿಭಟನೆ ಲಯನ್ನುದ್ದೇಶಿಸಿ ಸಿಪಿಎಂ ಜಿಲ್ಲಾ ನಾಯಕರಾದ ಕ್ರಷ್ಣಪ್ಪ ಸಾಲ್ಯಾನ್, ಜಯಂತ ನಾಯಕ್ ರವರು ಮಾತನಾಡಿದರು.ಪ್ರತಿಭಟನೆಯಲ್ಲಿ ಸಿಪಿಎಂ ಉಳ್ಳಾಲ ವಲಯ ಸಮಿತಿ ಮುಖಂಡರಾದ ಪದ್ಮಾವತಿ ಶೆಟ್ಟಿ, ಸುಂದರ ಕುಂಪಲ, ಶೇಖರ್ ಕುಂದರ್, ಪ್ರಮೋದಿನಿ ಕಲ್ಲಾಪು, ಜನಾರ್ಧನ ಕುತ್ತಾರ್, ಬಾಬು ಶೆಟ್ಟಿ ಪಿಲಾರ್, ಇಬ್ರಾಹಿಂ ಮದಕ, ಸಿಪಿಎಂ ಮುಡಿಪು ವಲಯ ಸಮಿತಿ ನಾಯಕರಾದ ರಾಮಚಂದ್ರ ಪಜೀರ್, ರಿಜ್ವಾನ್ ಹರೇಕಳ, ರಜಾಕ್ ಮೊಂಟೆಪದವು, ರಜಾಕ್ ಮುಡಿಪು,ಅಸ್ಪಕ್ ಅಲೇಕಳ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು