8:42 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ: ಎಬಿವಿಪಿ ಭರ್ಜರಿ ಗೆಲುವು

09/11/2024, 22:30

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಭರ್ಜರಿ ಗೆಲುವು ಸಾಧಿಸಿದೆ.


ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಸುಮಾರು 16 ವರ್ಷಗಳಿಂದ ಗೆಲುವು ಸಾಧಿಸಿಕೊಂಡು ಬಂದಿರುವ ವಿದ್ಯಾರ್ಥಿ ಪರಿಷತ್ ಇಂದು ಕೂಡ ಗೆಲುವಿನ ನಗೆ ಬೀರಿದೆ.
ಕಳೆದ ಮೂರು ವರ್ಷಗಳಿಂದ 32 ತರಗತಿ ಅಭ್ಯರ್ಥಿಗಳಲ್ಲಿ ಗೆಲುವು ಸಾಧಿಸಿಕೊಂಡು ಬಂದಿದ್ದು, ಈ ಬಾರಿ 33 ಸ್ಥಾನಗಳಲ್ಲಿ 33 ಸ್ಥಾನಗಳನ್ನು ಕೂಡಾ ವಿದ್ಯಾರ್ಥಿ ಪರಿಷತ್ ಪರವಾಗಿ ಗೆದ್ದು ಕೊಂಡಿದೆ.
ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಸಾತ್ವಿಕ್ , ಕಾರ್ಯದರ್ಶಿಯಾಗಿ ಕೀರ್ತನ್ , ಸಹ ಕಾರ್ಯದರ್ಶಿಯಾಗಿ ನಂದಿತಾ ಎಸ್., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪೂಜಾ ಶೆಟ್ಟಿ, ಸಾಂಸ್ಕೃತಿಕ ಸಹ ಕಾರ್ಯದರ್ಶಿಯಾಗಿ ಅನನ್ಯ ಇವರುಗಳು ಜವಾಬ್ದಾರಿ ಸ್ವೀಕರಿಸಿದರು.
ಚುನಾವಣಾ ಪ್ರಕ್ರಿಯೆಯ ನಂತರದಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ತರಗತಿ ನಾಯಕರುಗಳು ಸೇರಿ ಮಂಗಳೂರಿನ ಪ್ರಮುಖ ಬೀದಿಗಳಲ್ಲಿ ವಿಜಯಾತ್ರೆ ನಡೆಸಿ ಮೆರವಣಿಗೆ ಪುರಭವನದಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಮಂಗಳೂರು ಜಿಲ್ಲಾ ಸಹ ಸಂಚಾಲಕರಾದ ಪ್ರತೀಕ್ ಬಂಟ್ವಾಳ , ಮಂಗಳೂರು ಮಹಾನಗರ ಕಾರ್ಯದರ್ಶಿಗಳಾದ ಮೋನಿಶ್ ತುಮಿನಾಡು ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಮರಾಠಿ ಮತ್ತು ವಿದ್ಯಾರ್ಥಿನಿ ವಿಸ್ತಾರಕ್ ಆದ ಶ್ರೀ ಲಕ್ಷ್ಮೀ‌ ಹಾಗೂ ಮಂಗಳಗೌರಿ ಯು.ಸಿ.ಎಂ ಕಾಲೇಜು ಘಟಕದ ಅಧ್ಯಕ್ಷ ನಿಖಿತ್ ಹಾಗೂ ಶಾಶಂಕ್, ಹಿತೇಶ್ ಮತ್ತು ಮಂಗಳೂರು ಮಹಾನಗರದ ಪ್ರಮುಖರು ಸೇರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು