10:59 PM Wednesday11 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಕೋವಿಡ್‌; ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಭ್ರಷ್ಟಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

09/11/2024, 22:36

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ನ್ಯಾ.ಮೈಕೆಲ್ ಡಿ ಕುನ್ಹಾ ಅವರ ತನಿಖಾ ಆಯೋಗ ಶಿಫಾರಸು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಮೆಟ್ರಿಕಿ ಗ್ರಾಮದಲ್ಲಿ ನಡೆದ ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಕರ್ನಾಟಕ ಬಿಜೆಪಿ ಸರ್ಕಾರ ಮತ್ತು ಸಚಿವ ಶ್ರೀರಾಮುಲು ಅವರು ಹಣ ಲೂಟಿ ಮಾಡುವುದರಲ್ಲಿ ಮುಳುಗಿದ್ದರು. ಮುಗ್ಧ ಜನರ ಮೃತದೇಹಗಳ ಹೆಸರಲ್ಲೂ ಭ್ರಷ್ಟಚಾರ ನಡೆಸಿದ ಬಿಜೆಪಿ ನಾಯಕರನ್ನು ಯಾವ ದೇವರೂ ಕ್ಷಮಿಸಲ್ಲ, ನೀವೂ ಕ್ಷಮಿಸಬೇಡಿ.
ಬಿಜೆಪಿ ಶ್ರೀಮಂತರ ಮತ್ತು ಮೇಲ್ವರ್ಗದವರ ಪಕ್ಷ. ಕಾಂಗ್ರೆಸ್ ಜಾರಿ ಮಾಡುವ ಎಲ್ಲಾ ಬಡವರ ಪರವಾದ ಕಾರ್ಯಕ್ರಮಗಳನ್ನು ವಿರೋಧಿಸುತ್ತದೆ. ಅಪಪ್ರಚಾರ ಮಾಡುತ್ತದೆ. ಆಗ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸಿ ಅಪಪ್ರಚಾರ ಮಾಡಿತ್ತು. ಈಗ ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳನ್ನು ವಿರೋಧಿಸಿ ಅಪಪ್ರಚಾರ ಮಾಡುತ್ತಿದೆ. ಇದೇ ಬಿಜೆಪಿಯ ಜಾಯಮಾನ ಎಂದರು.
ಕರ್ನಾಟಕ ಬಿಜೆಪಿ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ದಲಿತರು, ಹಿಂದುಳಿದವರ ಪರವಾಗಿ ಒಂದೇ ಒಂದು ಕಾರ್ಯಕ್ರಮ ಕೊಟ್ಟಿದ್ದರೆ ನೆನಪಿಸಿಕೊಂಡು ಹೇಳಿ ನೋಡೋಣ. ಯಾವ ಕಾರ್ಯಕ್ರಮವನ್ನೂ ಕೊಟ್ಟಿಲ್ಲ. ಅದಕ್ಕೇ ನಿಮಗೆ ನೆನಪಾಗಲು ಸಾಧ್ಯವೇ ಇಲ್ಲ. ಸಂಡೂರಿನಲ್ಲಿರುವ ರಸ್ತೆ, ಶಾಲೆ, ವಸತಿ ಶಾಲೆ, ಅಂಗನವಾಡಿ, ಆಸ್ಪತ್ರೆ, ನೀರು, ನೀರಾವರಿ ಎಲ್ಲವೂ ಆಗಿರುವುದು ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ. ಬಿಜೆಪಿಯವರು ಕೇವಲ ಸುಳ್ಳು ಹೇಳಿಕೊಂಡು, ಜನರ ನಡುವೆ ದ್ವೇಷ ಬಿತ್ತುತ್ತಾ ರಾಜಕಾರಣ ಮಾಡುತ್ತಿದ್ದಾರೆ.
ಹಿಂದೆ ಜನಾರ್ದನ ರೆಡ್ಡಿಯವರ ಟೀಮು ನಡೆಸಿದ್ದ ಭ್ರಷ್ಟಾಚಾರವನ್ನು ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ಬಯಲಿಗೆ ಎಳೆದಿದ್ದರು. ಇವರು ಅಧಿಕಾರಕ್ಕೆ ಬರೋದೇ ಲೂಟಿ ಮಾಡೋದಕ್ಕೆ. ಆದ್ದರಿಂದ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಮ್ ಅವರನ್ನು ಗೆಲ್ಲಿಸಿ ಅಭಿವೃದ್ಧಿಗೆ ನಿಮ್ಮ ಬೆಂಬಲ ನೀಡಿ ಎಂದು ಸಿದ್ದರಾಮಯ್ಯ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು