7:30 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

10/11/2024, 14:59

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದ್ದು, ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು.
ಜಿಂದಾಲ್ ವಿದ್ಯಾನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ‌ಮಾತನಾಡಿದರು.
ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳು ಗೆದ್ದಾಗ ಸಿಎಂ ನಿರಾಳವಾಗಿದ್ದರು. ಆದರೆ, ಕಳೆದ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಹಗರಣಗಳನ್ನು ಬಿಜೆಪಿ ಒಂದೊಂದು ಬಯಲಿಗೆ ಎಳೆಯುತ್ತಿದ್ದಂತೆ ಸಿದ್ದರಾಮಯ್ಯ ಆತಂಕದಲ್ಲಿ ಇದ್ದಾರೆ ಎಂದು ವಾಗ್ದಳಿ ನಡೆಸಿದರು.
ರಾಜ್ಯದಲ್ಲಿ ಅಸಮರ್ಥ ಸಿಎಂಯೊಬ್ಬರು ಆಡಳಿತ‌ ನಡೆಸುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟಾಚಾರ ಮುಕ್ತ ಮಾಡುತ್ತವೆ ಎಂದು ಅಧಿಕಾರದ ಚುಕ್ಕಾಣಿ ಹಿಡಿಯಿತು. ಆದರೆ, ಸಾಲು ಸಾಲು ಹಗರಣಗಳಿಂದ ಒಂದೂವರೆ ವರ್ಷದಲ್ಲಿಯೇ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಹದಿನೈದು ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ಎ1 ಆರೋಪಿಯಾಗಿ ಅಪರಾಧಿ ಸ್ಥಾನದಲ್ಲಿ‌ ನಿಂತಿದ್ದಾರೆ. ಮುಡಾ ಕಮಿಷನರ್ ದಿನೇಶ್ ಎಂಬ ಅಧಿಕಾರಿಯನ್ನು ಸ್ವತಃ ಸಿಎಂ ಬಚ್ಚಿಟ್ಟಿದ್ದಾರೆ ಎಂದರು.
ಕೋವಿಡ್ ಅಕ್ರಮದ ಬಗ್ಗೆ ನ್ಯಾ. ಮೈಕಲ್ ಕುನ್ಹಾ ಮಧ್ಯಂತರ 14 ಪುಟದ ವರದಿಯಲ್ಲಿ ಹದಿನಾಲ್ಕು ಕೋಟಿ ರೂ. ಹಗರಣ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಈ ವರದಿಯಿಂದ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಶ್ರೀರಾಮುಲು ಅವರನ್ನು ಬೆದರಿಸಲು ಹೊರಟಿದ್ದಾರೆ. ಆದರೆ, ಯಡಿಯೂರಪ್ಪ ಅವರ ತಾಕತ್ತು ಕಾಂಗ್ರೆಸ್ ‌ನಾಯಕರಿಗಿಂತ ಸಿದ್ದರಾಮಯ್ಯ ಅವರಿಗೆ ಹೆಚ್ಚು ಗೊತ್ತು ಎಂದರು. ನಾನಿನ್ನು ಅಂಬೆಗಾಲು ಇಡುತ್ತಿರುವದಕ್ಕೆ ಸಿದ್ದರಾಮಯ್ಯ ಭಯ ಬೀತರಾಗಿದ್ದಾರೆ. ಆದರೆ, ಇನ್ನೂ ಆನೆಗಾಲು ಇಟ್ಟರೆ ಸಿದ್ದರಾಮಯ್ಯ ಪರಿಸ್ಥಿತಿ ಏನು ಎಂದು ವ್ಯಂಗ್ಯವಾಡಿದರು. ಗ್ಯಾರಂಟಿ ಯೋಜನೆಗಳು ಕೇವಲ ತಾತ್ಕಾಲಿಕ ಕೆಲವೇ ದಿನಗಳಲ್ಲಿ ಸ್ಥಗಿತವಾಗಲಿವೆ ಎಂದರು.
ಶಾಸಕರಾದ‌ ಜಿ. ಜನಾರ್ದನ ರೆಡ್ಡಿ, ಹರೀಶ್‌ ಪೂಂಜಾ, ಕೃಷ್ಣಾ ನಾಯ್ಕ್, ದೀರಜ್ ಗುಂಡೂರಾವ್, ಮಾಜಿ ಶಾಸಕರಾದ‌ ರೇಣುಕಾಚಾರ್ಯ, ಅರಗ ಜ್ಞಾನೇಂದ್ರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು