4:39 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ದಶಕದ ಬಳಿಕ ಮತ್ತೆ ನಕ್ಸಲ್ ಸದ್ದು:? ಇಬ್ಬರು ಶಂಕಿತ ವ್ಯಕ್ತಿಗಳ ಬಂಧನ; ನಾಡ ಬಂದೂಕು ವಶ

11/11/2024, 20:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದಶಕಗಳ ಬಳಿಕ ಕಾಫಿನಾಡಿನ‌ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಲಾರಂಭಿಸಿದೆ. ಇಬ್ಬರು ಶಂಕಿತ ವ್ಯಕ್ತಿಗಳನ್ನು ನಕ್ಸಲ್ ನಿಗ್ರಹ ಪಡೆ (ಎಎನ್ ಎಫ್) ತೀವ್ರ ವಿಚಾರಣೆಗೊಳಪಡಿಸಿದ್ದು, ನಾಡ ಬಂದೂಕು ವಶಪಡಿಸಿಕೊಳ್ಳಲಾಗಿದೆ.
2014ರ ನಂತರ ಮಲೆನಾಡಲ್ಲಿ ಮೊದಲ ಬಾರಿಗೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಮಲೆನಾಡಿಗೆ ಆವರಿಸಿದ ಒತ್ತುವರಿ ತೆರೆವು ಹಾಗೂ ಕಸ್ತೂರಿ ರಂಗನ್ ವರದಿ ಭಯದ ಹಿನ್ನೆಲೆಯಲ್ಲಿ ನಕ್ಸಲ್ ಚಟುವಟಿಕೆಗೆ ಮತ್ತೆ ಜೀವ ಬಂದಿದೆ ಎನ್ನಲಾಗಿದೆ. ಈ ಎಲ್ಲ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಶಂಕಿತ ನಕ್ಸಲರು ಗ್ರಾಮಸ್ಥರ ಸಂಪರ್ಕ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.
ನಕ್ಸಲ್ ನಿಗ್ರಹ ಪಡೆ ಕೊಪ್ಪ ತಾಲೂಕಿನ ಗಡಿ ಭಾಗದ ಗ್ರಾಮದ ಈ ಇಬ್ಬರು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಕೊಪ್ಪ ತಾಲೂಕಿನ ಯಡಗುಂದ ಮೂಲದ ವ್ಯಕ್ತಿಗಳು ಇವರಾಗಿದ್ದಾರೆ. ಇಬ್ಬರಿಗೆ ಸಂಬಂಧಿಸಿದ ಸ್ಥಳದಲ್ಲಿ ಎಎನ್ ಎಫ್ ಟೀಂ ಶೋಧ ನಡೆಸಿದೆ. ನಾಡ ಬಂದೂಕು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಶೃಂಗೇರಿ ಪೊಲೀಸ್ ಠಾಣೆಗೆ ಕರೆತಂದು ಇಬ್ಬರ ವಿಚಾರಣೆ ನಡೆಸಲಾಗಿದೆ. ನಕ್ಸಲ್ ನಿಗ್ರಹ ಪಡೆಯಿಂದ ಮಲೆನಾಡಲ್ಲಿ ತೀವ್ರ ಶೋಧ ಕಾರ್ಯ ಆರಂಭವಾಗಿದೆ. ಎಎನ್ ಎಫ್ ಎಸ್ಪಿ ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು