7:52 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ದಶಕದ ಬಳಿಕ ಮತ್ತೆ ನಕ್ಸಲ್ ಸದ್ದು:? ಇಬ್ಬರು ಶಂಕಿತ ವ್ಯಕ್ತಿಗಳ ಬಂಧನ; ನಾಡ ಬಂದೂಕು ವಶ

11/11/2024, 20:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದಶಕಗಳ ಬಳಿಕ ಕಾಫಿನಾಡಿನ‌ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಲಾರಂಭಿಸಿದೆ. ಇಬ್ಬರು ಶಂಕಿತ ವ್ಯಕ್ತಿಗಳನ್ನು ನಕ್ಸಲ್ ನಿಗ್ರಹ ಪಡೆ (ಎಎನ್ ಎಫ್) ತೀವ್ರ ವಿಚಾರಣೆಗೊಳಪಡಿಸಿದ್ದು, ನಾಡ ಬಂದೂಕು ವಶಪಡಿಸಿಕೊಳ್ಳಲಾಗಿದೆ.
2014ರ ನಂತರ ಮಲೆನಾಡಲ್ಲಿ ಮೊದಲ ಬಾರಿಗೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಮಲೆನಾಡಿಗೆ ಆವರಿಸಿದ ಒತ್ತುವರಿ ತೆರೆವು ಹಾಗೂ ಕಸ್ತೂರಿ ರಂಗನ್ ವರದಿ ಭಯದ ಹಿನ್ನೆಲೆಯಲ್ಲಿ ನಕ್ಸಲ್ ಚಟುವಟಿಕೆಗೆ ಮತ್ತೆ ಜೀವ ಬಂದಿದೆ ಎನ್ನಲಾಗಿದೆ. ಈ ಎಲ್ಲ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಶಂಕಿತ ನಕ್ಸಲರು ಗ್ರಾಮಸ್ಥರ ಸಂಪರ್ಕ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.
ನಕ್ಸಲ್ ನಿಗ್ರಹ ಪಡೆ ಕೊಪ್ಪ ತಾಲೂಕಿನ ಗಡಿ ಭಾಗದ ಗ್ರಾಮದ ಈ ಇಬ್ಬರು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಕೊಪ್ಪ ತಾಲೂಕಿನ ಯಡಗುಂದ ಮೂಲದ ವ್ಯಕ್ತಿಗಳು ಇವರಾಗಿದ್ದಾರೆ. ಇಬ್ಬರಿಗೆ ಸಂಬಂಧಿಸಿದ ಸ್ಥಳದಲ್ಲಿ ಎಎನ್ ಎಫ್ ಟೀಂ ಶೋಧ ನಡೆಸಿದೆ. ನಾಡ ಬಂದೂಕು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಶೃಂಗೇರಿ ಪೊಲೀಸ್ ಠಾಣೆಗೆ ಕರೆತಂದು ಇಬ್ಬರ ವಿಚಾರಣೆ ನಡೆಸಲಾಗಿದೆ. ನಕ್ಸಲ್ ನಿಗ್ರಹ ಪಡೆಯಿಂದ ಮಲೆನಾಡಲ್ಲಿ ತೀವ್ರ ಶೋಧ ಕಾರ್ಯ ಆರಂಭವಾಗಿದೆ. ಎಎನ್ ಎಫ್ ಎಸ್ಪಿ ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು