11:21 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಖಾಸಗಿ ಲೇಔಟ್‌ ನಿರ್ಮಾಣ ಕಾಮಗಾರಿ: ಚಿಟ್ಟೇಬೈಲು ಕ್ರಿಕೆಟ್ ಮೈದಾನ ಬಳಿ ಘನತ್ಯಾಜ್ಯ ರಾಶಿ!

12/11/2024, 00:14

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ‌ ಹೊದಲ-ಅರಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿತ್ತಿನಗದ್ದೆ ಚಿಟ್ಟೇಬೈಲು ಮಧ್ಯದಲ್ಲಿ ಸಾಂಬಾ ಸದಾಶಿವ ದೇವಸ್ಥಾನದ ಪಕ್ಕ ಪ್ರಜ್ಞಾ ಭಾರತಿ ಶಾಲೆಯ ಎದುರು ಖಾಸಗಿ ಲೇಔಟ್ ನಿರ್ಮಿಸುತ್ತಿದ್ದು, ಈ ಖಾಸಗಿ ಲೇಔಟ್‌ನ್ನು ಜೆಸಿಬಿಯಿಂದ ಸಮತಟ್ಟು ಮಾಡುವ ಸಂದರ್ಭದಲ್ಲಿ ಮರದ ಮುಂಡು, ಮಣ್ಣು, ಕಸಕಡ್ಡಿ ಇನ್ನಿತರ ಅನುಪಯುಕ್ತ ವಸ್ತುಗಳನ್ನು ಟ್ರ್ಯಾಕ್ಟರ್ ಮೂಲಕ ತಂದು ಚಿಟ್ಟೇಬೈಲು ಸಮೀಪ ಕ್ರಿಕೆಟ್ ಮೈದಾನದ ಪಕ್ಕದಲ್ಲಿ ಹಾಕುತ್ತಿದ್ದು ಇದರಿಂದ ಅಕ್ಕಪಕ್ಕದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.


ಈ ಕಸ ಹಾಕಿದ ಜಾಗವು ನೆರಟೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಮಾಹಿತಿಯೂ ಕೂಡ ಲಭ್ಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ರಾಶಿ ರಾಶಿ ಘನತ್ಯಾಜ್ಯವನ್ನು ಹಾಕುತ್ತಿರುವುದನ್ನು ತಡೆಯುವಂತೆ ಹಾಗೂ ಸೂಕ್ತ ಕ್ರಮ ಜರುಗಿಸುವಂತೆ ಚಿಟ್ಟೇಬೈಲು ಅಕ್ಕಪಕ್ಕದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು