4:13 AM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಖಾಸಗಿ ಲೇಔಟ್‌ ನಿರ್ಮಾಣ ಕಾಮಗಾರಿ: ಚಿಟ್ಟೇಬೈಲು ಕ್ರಿಕೆಟ್ ಮೈದಾನ ಬಳಿ ಘನತ್ಯಾಜ್ಯ ರಾಶಿ!

12/11/2024, 00:14

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ‌ ಹೊದಲ-ಅರಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿತ್ತಿನಗದ್ದೆ ಚಿಟ್ಟೇಬೈಲು ಮಧ್ಯದಲ್ಲಿ ಸಾಂಬಾ ಸದಾಶಿವ ದೇವಸ್ಥಾನದ ಪಕ್ಕ ಪ್ರಜ್ಞಾ ಭಾರತಿ ಶಾಲೆಯ ಎದುರು ಖಾಸಗಿ ಲೇಔಟ್ ನಿರ್ಮಿಸುತ್ತಿದ್ದು, ಈ ಖಾಸಗಿ ಲೇಔಟ್‌ನ್ನು ಜೆಸಿಬಿಯಿಂದ ಸಮತಟ್ಟು ಮಾಡುವ ಸಂದರ್ಭದಲ್ಲಿ ಮರದ ಮುಂಡು, ಮಣ್ಣು, ಕಸಕಡ್ಡಿ ಇನ್ನಿತರ ಅನುಪಯುಕ್ತ ವಸ್ತುಗಳನ್ನು ಟ್ರ್ಯಾಕ್ಟರ್ ಮೂಲಕ ತಂದು ಚಿಟ್ಟೇಬೈಲು ಸಮೀಪ ಕ್ರಿಕೆಟ್ ಮೈದಾನದ ಪಕ್ಕದಲ್ಲಿ ಹಾಕುತ್ತಿದ್ದು ಇದರಿಂದ ಅಕ್ಕಪಕ್ಕದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.


ಈ ಕಸ ಹಾಕಿದ ಜಾಗವು ನೆರಟೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಮಾಹಿತಿಯೂ ಕೂಡ ಲಭ್ಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಿ ರಾಶಿ ರಾಶಿ ಘನತ್ಯಾಜ್ಯವನ್ನು ಹಾಕುತ್ತಿರುವುದನ್ನು ತಡೆಯುವಂತೆ ಹಾಗೂ ಸೂಕ್ತ ಕ್ರಮ ಜರುಗಿಸುವಂತೆ ಚಿಟ್ಟೇಬೈಲು ಅಕ್ಕಪಕ್ಕದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು