2:58 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ?: ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಆರಂಭ

12/11/2024, 19:36

ಸಂತೋಷ್ ಅತ್ತಿಗೆರೆbಚಿಕ್ಕಮಗಳೂರು

info.reporterkarnataka@gmail.com

ದಶಕಗಳ ಬಳಿಕ ಕಾಫಿನಾಡಿನ ಮಲೆನಾಡು ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆಯ ಗುಮಾನಿ ಹಿನ್ನೆಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕೂಂಬಿಂಗ್ ಶುರುವಾಗಿದೆ.
ನಕ್ಸಲ್ ನಿಗ್ರಹ ಪಡೆಯಿಂದ ತನಿಖೆ ಚುರುಕುಗೊಂಡಿದ್ದು, ಕೂಬಿಂಗ್ ಆರಂಭಿಸಲಾಗಿದೆ.
ಕಳಸ, ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸಲಾಗುವುದು. ದಟ್ಟ ಕಾನನದ ಮಧ್ಯೆಯಲ್ಲಿ ನಕ್ಸಲರಿಗಾಗಿ ತೀವ್ರ ಶೋಧ ನಡೆದಿದೆ. ಎಎನ್ಎಫ್ ಪಡೆ ಡಾಗ್ ಸ್ಕ್ವಾಡ್ ಬಳಸಿಕೊಂಡು ಕೂಂಬಿಂಗ್ ತೀವ್ರಗೊಳಿಸಿದೆ.
ಕೊಪ್ಪ ಕಾಡಂಚಿನ ಗ್ರಾಮದ ಇಬ್ಬರನ್ನು ಬಂಧಿಸಿ ಎಸ್ಪಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.
ನಕ್ಸಲ್ ಮಾಹಿತಿದಾರರೆಂದು ಕೊಪ್ಪ ತಾಲೂಕಿನ ಎಡಗುಂದ ಗ್ರಾಮದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮಲೆನಾಡ ಸಮಸ್ಯೆ ಮುಂದಿಟ್ಟುಕೊಂಡು ನಕ್ಸಲರು ಗ್ರಾಮಸ್ಥರ ಸಂಪರ್ಕ ಮಾಡಿದ್ದ ಅನುಮಾನ ಉಂಟಾಗಿದೆ.
ಕಳೆದ ವಾರ ಶೃಂಗೇರಿ ತಾಲೂಕಿನ ಕಾಡಂಚಿನ ಗ್ರಾಮಕ್ಕೆ 6 ಜನ ಅಪರಿಚಿತರು ಬಂದಿದ್ದರು ಎನ್ನಲಾಗಿದೆ. ನಿನ್ನೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು