8:19 AM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ?: ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಆರಂಭ

12/11/2024, 19:36

ಸಂತೋಷ್ ಅತ್ತಿಗೆರೆbಚಿಕ್ಕಮಗಳೂರು

info.reporterkarnataka@gmail.com

ದಶಕಗಳ ಬಳಿಕ ಕಾಫಿನಾಡಿನ ಮಲೆನಾಡು ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆಯ ಗುಮಾನಿ ಹಿನ್ನೆಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕೂಂಬಿಂಗ್ ಶುರುವಾಗಿದೆ.
ನಕ್ಸಲ್ ನಿಗ್ರಹ ಪಡೆಯಿಂದ ತನಿಖೆ ಚುರುಕುಗೊಂಡಿದ್ದು, ಕೂಬಿಂಗ್ ಆರಂಭಿಸಲಾಗಿದೆ.
ಕಳಸ, ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸಲಾಗುವುದು. ದಟ್ಟ ಕಾನನದ ಮಧ್ಯೆಯಲ್ಲಿ ನಕ್ಸಲರಿಗಾಗಿ ತೀವ್ರ ಶೋಧ ನಡೆದಿದೆ. ಎಎನ್ಎಫ್ ಪಡೆ ಡಾಗ್ ಸ್ಕ್ವಾಡ್ ಬಳಸಿಕೊಂಡು ಕೂಂಬಿಂಗ್ ತೀವ್ರಗೊಳಿಸಿದೆ.
ಕೊಪ್ಪ ಕಾಡಂಚಿನ ಗ್ರಾಮದ ಇಬ್ಬರನ್ನು ಬಂಧಿಸಿ ಎಸ್ಪಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.
ನಕ್ಸಲ್ ಮಾಹಿತಿದಾರರೆಂದು ಕೊಪ್ಪ ತಾಲೂಕಿನ ಎಡಗುಂದ ಗ್ರಾಮದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮಲೆನಾಡ ಸಮಸ್ಯೆ ಮುಂದಿಟ್ಟುಕೊಂಡು ನಕ್ಸಲರು ಗ್ರಾಮಸ್ಥರ ಸಂಪರ್ಕ ಮಾಡಿದ್ದ ಅನುಮಾನ ಉಂಟಾಗಿದೆ.
ಕಳೆದ ವಾರ ಶೃಂಗೇರಿ ತಾಲೂಕಿನ ಕಾಡಂಚಿನ ಗ್ರಾಮಕ್ಕೆ 6 ಜನ ಅಪರಿಚಿತರು ಬಂದಿದ್ದರು ಎನ್ನಲಾಗಿದೆ. ನಿನ್ನೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು