2:27 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ರಾಯಿ ಸರಕಾರಿ ವಿದ್ಯಾಸಂಸ್ಥೆ: ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಮಾಹಿತಿ

13/11/2024, 22:04

ಬಂಟ್ವಾಳ(reporterkarnataka.com): ರಾಯಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಹಾಗೂ ಕನ್ನಡ ಮಾಧ್ಯಮದ ಸಾಧಕಗಳ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿದಾರರಾಗಿ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಸರಕಾರವು ಅತ್ಯುತ್ತಮವಾದಂತಹ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದು ಉಚಿತವಾಗಿ ದೊರಕುವ ಎಲ್ಲಾ ಸವಲತ್ತುಗಳೊಂದಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಸಂದರ್ಭದಲ್ಲಿ ಕನ್ನಡ ಮಾಧ್ಯಮಕ್ಕೆ ಮತ್ತು ಗ್ರಾಮೀಣ ಶಿಕ್ಷಣಕ್ಕೆ ಕೃಪಾಂಕ ನೀಡಿ ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.
ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು