2:18 PM Thursday9 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ ತಾಲೂಕು ವಕೀಲರಿಂದ ಅನಿರ್ದಿಷ್ಟ ಪ್ರತಿಭಟನೆ: ನ್ಯಾಯಾಲಯ ಕಲಾಪಕ್ಕೆ ಬಹಿಷ್ಕಾರ

14/11/2024, 20:52

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ನ್ಯಾಯಾಲಯದ ವಕೀಲರು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಹಲವು ವರ್ಷಗಳ ವಕೀಲರ ಬೇಡಿಕೆಯಂತೆ ಪಟ್ಟಣದಿಂದ ಚಿಂತಾಮಣಿ ಸಂಪರ್ಕ ಕಲ್ಪಿಸುವ ರಸ್ತೆ ಕಾಲೋನಿ ಕ್ರಾಸ್ ಬಳಿ ೫ ಎಕರೆ ಪ್ರದೇಶದಲ್ಲಿ ಅಂದಾಜು ೧೫ ಕೋಟಿ ವೆಚ್ಚದಲ್ಲಿ ನೂತನ ನ್ಯಾಯಾಲಯ ಹಾಗೂ ನ್ಯಾಯಾಧೀಶರ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯದ ಕಲಾಪ ಆವರಣ ತುಂಬಾ ಚಿಕ್ಕದಾಗಿದೆಯೆಂದು ವಕೀಲರು ಬೇಸರ ವ್ಯಕ್ತಪಡಿಸಿ ಹಲವು ಬಾರಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರು. ಮನವಿ ಮಾಡಿದರೂ ಸಹ ಕಾಮಗಾರಿಯನ್ನು ಮುಂದುವರಿಸುತ್ತಿದ್ದಾರೆ ಎಂದು ವಕೀಲರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಜಯರಾಮೇಗೌಡ ಮಾತನಾಡಿ, ನಮ್ಮ ತಾಲ್ಲೂಕಿಗೆ ನೂತನ ನ್ಯಾಯಾಲಯ ಸಂಕೀರ್ಣ ಮಂಜೂರಾತಿಯಾಗಿದ್ದು ತ್ವರಿತಗತಿಯಲ್ಲಿ ನ್ಯಾಯಾಲಯದ ಕಾಮಗಾರಿಯನ್ನು ಮಾಡಲಾಗುತ್ತಿದೆ. ಹೊಸ ಕಟ್ಟಡಗಳ ನಮೂನೆ ಪ್ರಕಾರ ಬಂಗಾರಪೇಟೆ, ಮುಳಬಾಗಿಲು ಹಾಗೂ ಶಿಡ್ಲಘಟ್ಟದಲ್ಲಿ ನೂತನ ನ್ಯಾಯಾಲಯ ಸಂಕೀರ್ಣಗಳು ನಿರ್ಮಾಣವಾಗಿದ್ದು ಬಹಳ ಸುಸೂತ್ರವಾಗಿ ಬಹಳ ಅಚ್ಚುಕಟ್ಟಾಗಿ ನಿರ್ಮಾಣ ಮಾಡಲಾಗಿದೆ. ಅದೇ ರೀತಿಯಾಗಿ ನಮ್ಮ ತಾಲ್ಲೂಕಿನಲ್ಲಿ ಚಿಂತಾಮಣಿ ಮುಖ್ಯ ರಸ್ತೆ ಕಾಲೋನಿ ಕ್ರಾಸ್ ಸಮೀಪ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು ಕಲಾಪದ ಆವರಣ ಬಹಳ ಚಿಕ್ಕದಾಗಿದ್ದು ಮುಂದಿನ ಪೀಳಿಗೆ, ವಕೀಲರು ಹಾಗೂ ಕಕ್ಷಿದಾರರಿಗೆ ಅನುಕೂಲವಾಗುವಂತೆ ನ್ಯಾಯಾಲಯದ ಕಲಾಪ ಆವರಣವನ್ನು ವಿಶಾಲವಾಗಿ ಮಾಡಬೇಕು ಎಂದು ಹಲವು ಬಾರಿ ಮನವಿ ಮಾಡಿದರು ಸಹ ಕಾಮಗಾರಿಯನ್ನು ಅದೇ ರೀತಿಯಾಗಿ ಮುಂದುವರೆಸುತ್ತಿರುವ ಕಾರಣ ತಾಲ್ಲೂಕಿನ ಎಲ್ಲಾ ವಕೀಲರು ಸಹ ಕಲಾಪಗಳಿಗೆ ಹಾಜರಾಗದೇ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಸಮಸ್ಯೆ ಬಗೆಹರಿಸುವ ತನಕ ಪ್ರತಿಭಟನೆಯನ್ನು ಕೈಬಿಡುವುದಿಲ್ಲ ವೆಂದು ಸಹ ತಿಳಿಸಿದರು. ಈ ಸಂದರ್ಭದಲ್ಲಿ ಎಲ್ಲಾ ವಕೀಲರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು