7:00 PM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ಬಹುಸಂಸ್ಕೃತಿ ಉತ್ಸವದ ಚಿತ್ರಕಲಾ ಫಲಿತಾಂಶ ಪ್ರಕಟ: ವಿಟ್ಲ ಪ್ರೌಢಶಾಲೆಯ ಕೌಶಿಕ್ ಪ್ರಥಮ, ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ದ್ವಿತೀಯ

14/11/2024, 20:59

ಮಂಗಳೂರು(reporterkarnataka.com): ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಸಲುವಾಗಿ ತುಳು ಭವನದಲ್ಲಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ.
ವಿಟ್ಲ ವಿಠಲ ಪ್ರೌಢಶಾಲೆಯ ಕೌಶಿಕ್ ಪ್ರಥಮ ಬಹುಮಾನ ಪಡೆದಿದ್ದಾರೆ. ಮಂಗಳೂರು ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ಹರೀಶ್ ದ್ವಿತೀಯ ಬಹುಮಾನ ಪಡೆದಿದ್ದಾರೆ. ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪೂಜಾ ತೃತೀಯ ಬಹುಮಾನ ಪಡೆದಿದ್ದಾರೆ.5 ಮಂದಿಗೆ ಸಮಾಧಾನಕರ ಬಹುಮಾನವನ್ನು ಘೋಷಿಸಲಾಗಿದೆ.
ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿಘ್ನೇಶ್ ವಿಶ್ವಕರ್ಮ, ವೇಣೂರು ಸರಕಾರಿ ಪ್ರೌಢ ಶಾಲೆಯ ಶರತ್ , ವೇಣೂರು ಸರಕಾರಿ ಪ್ರೌಢ ಶಾಲೆಯ ಸಾತ್ವಿಕ್ ಗಣೇಶ್ , ಮಂಗಳೂರು ಲೇಡಿಹಿಲ್ ವಿಕ್ಟೋರಿಯಾ ಶಾಲೆಯ ಸೋನಾಲಿ ಕೆ.ಎಸ್. , ದೇರಳಕಟ್ಟೆ ವಿದ್ಯಾರತ್ನ ಶಾಲೆಯ ಮೆಹೆಕ್ ಫಾತಿಮಾ ಸಮಾಧಾನಕರ ಬಹುಮಾನ ಪಡೆದಿದ್ದಾರೆ.
ಹಿರಿಯ ಕಲಾವಿದ ಹಾಗೂ ನಿವೃತ್ತ ಚಿತ್ರಕಲಾ ಶಿಕ್ಷಕ ಗಣೇಶ್ ಸೋಮಾಯಾಜಿ, ಮಹಾಲಸಾ ಚಿತ್ರಕಲಾ ಶಾಲೆಯ ಶಿಕ್ಷಕ ಎನ್.ಎಸ್.ಪತ್ತಾರ್, ಯುವ ಕಲಾವಿದ ಹರೀಶ್ ಕೊಡಿಯಾಲ್ ಬೈಲ್ ತೀರ್ಪುಗಾರರಾಗಿ ಭಾಗವಹಿಸಿದ್ದರು.
ವಿಜೇತರಿಗೆ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು