1:57 AM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಬಹುಸಂಸ್ಕೃತಿ ಉತ್ಸವದ ಚಿತ್ರಕಲಾ ಫಲಿತಾಂಶ ಪ್ರಕಟ: ವಿಟ್ಲ ಪ್ರೌಢಶಾಲೆಯ ಕೌಶಿಕ್ ಪ್ರಥಮ, ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ದ್ವಿತೀಯ

14/11/2024, 20:59

ಮಂಗಳೂರು(reporterkarnataka.com): ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಸಲುವಾಗಿ ತುಳು ಭವನದಲ್ಲಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ.
ವಿಟ್ಲ ವಿಠಲ ಪ್ರೌಢಶಾಲೆಯ ಕೌಶಿಕ್ ಪ್ರಥಮ ಬಹುಮಾನ ಪಡೆದಿದ್ದಾರೆ. ಮಂಗಳೂರು ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ಹರೀಶ್ ದ್ವಿತೀಯ ಬಹುಮಾನ ಪಡೆದಿದ್ದಾರೆ. ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪೂಜಾ ತೃತೀಯ ಬಹುಮಾನ ಪಡೆದಿದ್ದಾರೆ.5 ಮಂದಿಗೆ ಸಮಾಧಾನಕರ ಬಹುಮಾನವನ್ನು ಘೋಷಿಸಲಾಗಿದೆ.
ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿಘ್ನೇಶ್ ವಿಶ್ವಕರ್ಮ, ವೇಣೂರು ಸರಕಾರಿ ಪ್ರೌಢ ಶಾಲೆಯ ಶರತ್ , ವೇಣೂರು ಸರಕಾರಿ ಪ್ರೌಢ ಶಾಲೆಯ ಸಾತ್ವಿಕ್ ಗಣೇಶ್ , ಮಂಗಳೂರು ಲೇಡಿಹಿಲ್ ವಿಕ್ಟೋರಿಯಾ ಶಾಲೆಯ ಸೋನಾಲಿ ಕೆ.ಎಸ್. , ದೇರಳಕಟ್ಟೆ ವಿದ್ಯಾರತ್ನ ಶಾಲೆಯ ಮೆಹೆಕ್ ಫಾತಿಮಾ ಸಮಾಧಾನಕರ ಬಹುಮಾನ ಪಡೆದಿದ್ದಾರೆ.
ಹಿರಿಯ ಕಲಾವಿದ ಹಾಗೂ ನಿವೃತ್ತ ಚಿತ್ರಕಲಾ ಶಿಕ್ಷಕ ಗಣೇಶ್ ಸೋಮಾಯಾಜಿ, ಮಹಾಲಸಾ ಚಿತ್ರಕಲಾ ಶಾಲೆಯ ಶಿಕ್ಷಕ ಎನ್.ಎಸ್.ಪತ್ತಾರ್, ಯುವ ಕಲಾವಿದ ಹರೀಶ್ ಕೊಡಿಯಾಲ್ ಬೈಲ್ ತೀರ್ಪುಗಾರರಾಗಿ ಭಾಗವಹಿಸಿದ್ದರು.
ವಿಜೇತರಿಗೆ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು