5:38 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಗ್ರಂಥಾಲಯಗಳು ಅರಿವಿನ ಜ್ಞಾನದೀವಿಗೆಗಳು: ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ

14/11/2024, 23:50

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಗ್ರಂಥಾಲಯಗಳು ಅರಿವಿನ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದಲು ಬರುವವರಿಗೆ, ಜ್ಞಾನದ ಹೊಸ ಹೊಳಹನ್ನು ನೀಡುವ ಅಕ್ಷಯ ಭಂಡಾರಗಳಾಗಿವೇ. ಗ್ರಂಥಾಲಯಗಳ ಸಂಪನ್ಮೂಲಗಳು ಎಂದಿಗೂ ಎಲ್ಲಿಯೂ ಬತ್ತಿಹೋಗುವುದಿಲ್ಲ. ಪ್ರಾಚೀನ ಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ ವಿಷಯಗಳನ್ನು ತಿಳಿಸಲು ಸಿದ್ಧವಿರುವುವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಬೇಕಾದ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅಭಿಪ್ರಾಯಾಪಟ್ಟರು.
ಇಂದು ಜಿಲ್ಲಾ ಕೇಂದ್ರ ಗ್ರಂಥಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ರಂಥಾಲಯ ಸಪ್ತಾಹಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಆಧುನಿಕ ತಂತ್ರಜ್ಞಾನದಿಂದ ಇಂದಿನ ಮಕ್ಕಳಲ್ಲಿ ಓದುವ ಹವ್ಯಾಸ ಕುಂಠಿತಗೊಳ್ಳುತ್ತಿದೆ. ಒಂದು ವಿಷಯದ ಬಗ್ಗೆ ಅನೇಕ ಗ್ರಂಥಗಳನ್ನು ನೋಡಬೇಕಾದರೆ ನಾವು ಗ್ರಂಥಾಲಯಗಳಿಗೆ ಹೋಗಬೇಕು. ಗ್ರಂಥಾಲಯವೆಂದರೆ ಅಲ್ಲಿ ಎಲ್ಲ ಭಾಷೆಯ ಸಮೃದ್ಧ ಆಗರವಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳು ಇರಬೇಕು. ಇತ್ತೀಚಿಗೆ ಪುಸ್ತಕ ಗಳ ಸ್ಥಾನವನ್ನು ಇಂಟರ್ನೆಟ್ ಕಬಳಿಸಿದೆ. ಆದರೆ ಪುಸ್ತಕ ಓದಿದಷ್ಟು ಪರಿಣಾಮಕಾರಿಯಾದಂತಹ ಫಲಿತಾಂಶ ಜಾಲತಾಣಗಳಲ್ಲಿ ದೊರೆಯುವುದಿಲ್ಲ ಎಂದರು.
ಪುಸ್ತಕಗಳು ಆತ್ಮಸ್ಥೆರ್ಯವನ್ನು ಹೆಚ್ಚಿಸುತ್ತದೆ. ತಾನೇ ಸ್ವತಂತ್ರ ವಾಗಿ ಪುಸ್ತಕ ಬರೆಯಲು ಪ್ರೆರೇಪಿಸುತ್ತದೆ. ಮುಂದಿನ ಭವಿಷ್ಯದ ಪ್ರಜೆಗಳಾದ ನೀವು ಪುಸ್ತಕಗಳ ಜ್ಞಾನವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಹೊರಬೇಕು ಎಂದು ಅವರು ನುಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ. ವಿ. ಗೋಪಿನಾಥ್ ಅವರು ಮಾತನಾಡಿ ಗ್ರಂಥಗಳು ನಮ್ಮನ್ನು ಯಾರದೇ ಸಹಾಯವಿಲ್ಲದೆ ಗುರಿ ಮುಟ್ಟಲು ಸಹಾಯ ಮಾಡುತ್ತವೆ. ಕೀಳರಿಮೆ ಬಿಟ್ಟು ಕಠಿಣ ಪರಿಶ್ರಮ ಹಾಕಿದರೆ ಎಂತಹ ಸವಾಲನ್ನು ಸುಲಭವಾಗಿ ಪರಿಹರಿಸಬಹುದು ಎಂದರು.
ದೊಡ್ಡ ದೊಡ್ಡ ಸಾಧಕರೆಲ್ಲರೂ ಸಾಧಾರಣ ಕುಟುಂಬದಿಂದ ಬಂದವರು. ಎತ್ತರಕ್ಕೆ ಏರಲು ನಿರಂತರ ಅಧ್ಯಯನ ಸಹಕಾರಿ. ಇ ಸಪ್ತಾಹದಲ್ಲಿ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುಸ್ತಕಗಳು ಜೀವನದ ಪ್ರೇರಣೆ ನೀಡುತ್ತವೆ ಎಂದು ಅವರು ನುಡಿದರು.


ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ ಮಕ್ಕಳುದಿನನಿತ್ಯದ ಪಠ್ಯದ ಜೊತೆಗೆ ಪ್ರಚಲಿತ ವಿದ್ಯಮಾನಗಳ ಕುರಿತು ಅರಿವು ಬೆಳೆಸಿಕೊಳ್ಳಬೇಕು. ವೃತ್ತಪತ್ರಿಕೆಗಳನ್ನು ಓದುವುದನ್ನು ರೂಢಿಸಿಕೊಳ್ಳಬೇಕು.ಸಮಾಚಾರ ಸಂಗ್ರಹಣೆ ಉತ್ತಮ ಹವ್ಯಾಸವಾಗಿದೆ.ಈ ನಿಟ್ಟಿನಲ್ಲಿ ಗ್ರಂಥಾಲಯಗಳು ಜ್ಞಾನ ಭಂಡಾರ ವಾಗಿವೆ. ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಸುಕೃತ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ವಿಜಯಲಕ್ಷ್ಮಿ, ಗ್ರಂಥಾಲಯ ಇಲಾಖೆ ಉಪನಿರ್ದೇಶಕರು ಸಿ. ಗಣೇಶ್, ಇಲಾಖೆಯ ಅಧಿಕಾರಿ ಸಿಬ್ಬಂದಿಗಳು, ಹವ್ಯಾಸಿ ಓದುಗರು, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು