8:24 PM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಶಬರಿಮಲೆ ದೇವಸ್ಥಾನದ ವಾರ್ಷಿಕ ಯಾತ್ರೆ ಇಂದಿನಿಂದ ಆರಂಭ: ಪಂಪಾ ತೀರದಲ್ಲಿ ಭಕ್ತರ ದಂಡು

15/11/2024, 12:16

ತಿರುವನಂತಪುರಂ(reporterlarnataka.com): ದೇಶದ ಪ್ರಸಿದ್ದ ಯಾತ್ರಾ ಸ್ಥಳಗಳಲ್ಲೊಂದಾದ ಶಬರಿಮಲೆಯ ದೇಗುಲ ಇಂದು ತೆರೆಯಲಿದ್ದು,ಮಂಡಳ ಪೂಜೆ ಪ್ರಾರಂಭವಾಗಲಿದೆ.
ಭಕ್ತಾದಿಗಳು ಮಧ್ಯಾಹ್ನ 1.00 ಗಂಟೆಯಿಂದ ಪಂಪಾ ನದಿಯಿಂದ ಶಬರಿಮಲೆ ಯಾತ್ರೆ ಪ್ರಾರಂಭಿಸಬಹುದಾಗಿದೆ. ಆನ್‌ಲೈನ್ ಮೂಲಕ ಮುಂಗಡ ಬುಕಿಂಗ್ ಸೌಲಭ್ಯ ನೀಡಲಾಗಿದೆ. ನವೆಂಬ‌ರ್ ತಿಂಗಳ ಬುಕಿಂಗ್ ಭರ್ತಿಯಾಗಿದೆ. ಕೇವಲ ನ.30 ರ ಕೆಲವು ಸ್ಲಾಟ್ ಗಳು ಮಾತ್ರ ಲಭ್ಯವಿದೆ. ಡಿಸೆಂಬರ್ ತಿಂಗಳಲ್ಲಿ ದರ್ಶನ ಪಡೆಯಲು ಲಕ್ಷಾಂತರ ಮಂದಿ ಭಕ್ತರು ಸರದಿಯಲ್ಲಿದ್ದಾರೆ. ಈಗಾಗಲೇ ಮುಂಗಡ ಬುಕಿಂಗ್ ಮಾಡಿರುವ ಭಕ್ತರು ಒಂದು ವೇಳೆ ತಮ್ಮ ಪ್ರಯಾಣ ರದ್ದಾದರೆ ಅಥವಾ ಮುಂದೂಡಿಕೆಯಾದರೆ ತಮ್ಮ ಸ್ಲಾಟ್ ಕ್ಯಾನ್ಸಲ್ ಮಾಡಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ.
ನೇರವಾಗಿ ದರ್ಶನಕ್ಕೆ ಬರುವ ಭಕ್ತರು ತಮ್ಮ ಆಧಾರ್ ಕಾಡ್, ವೋಟರ್ ಐಡಿ ಅಥವಾ ಪಾಸ್ ಪೋರ್ಟ್ ಗುರುತಿನ ಚೀಟಿಯ ನಕಲು ತರಬೇಕು. ಪಂಪಾ ನದಿಯ ಬಳಿ 7 ಸಾವಿರ ಯಾತ್ರಿಕರಿಗೆ ಹಾಗೂ ನೀಲಕ್ಕಲ್ ಬಳಿ 8 ಸಾವಿರ ಯಾತ್ರಿಕರಿಗೆ ವಾಸ್ತವ್ಯದ ಅನುಕೂಲ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು