6:45 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಶಬರಿಮಲೆ ದೇವಸ್ಥಾನದ ವಾರ್ಷಿಕ ಯಾತ್ರೆ ಇಂದಿನಿಂದ ಆರಂಭ: ಪಂಪಾ ತೀರದಲ್ಲಿ ಭಕ್ತರ ದಂಡು

15/11/2024, 12:16

ತಿರುವನಂತಪುರಂ(reporterlarnataka.com): ದೇಶದ ಪ್ರಸಿದ್ದ ಯಾತ್ರಾ ಸ್ಥಳಗಳಲ್ಲೊಂದಾದ ಶಬರಿಮಲೆಯ ದೇಗುಲ ಇಂದು ತೆರೆಯಲಿದ್ದು,ಮಂಡಳ ಪೂಜೆ ಪ್ರಾರಂಭವಾಗಲಿದೆ.
ಭಕ್ತಾದಿಗಳು ಮಧ್ಯಾಹ್ನ 1.00 ಗಂಟೆಯಿಂದ ಪಂಪಾ ನದಿಯಿಂದ ಶಬರಿಮಲೆ ಯಾತ್ರೆ ಪ್ರಾರಂಭಿಸಬಹುದಾಗಿದೆ. ಆನ್‌ಲೈನ್ ಮೂಲಕ ಮುಂಗಡ ಬುಕಿಂಗ್ ಸೌಲಭ್ಯ ನೀಡಲಾಗಿದೆ. ನವೆಂಬ‌ರ್ ತಿಂಗಳ ಬುಕಿಂಗ್ ಭರ್ತಿಯಾಗಿದೆ. ಕೇವಲ ನ.30 ರ ಕೆಲವು ಸ್ಲಾಟ್ ಗಳು ಮಾತ್ರ ಲಭ್ಯವಿದೆ. ಡಿಸೆಂಬರ್ ತಿಂಗಳಲ್ಲಿ ದರ್ಶನ ಪಡೆಯಲು ಲಕ್ಷಾಂತರ ಮಂದಿ ಭಕ್ತರು ಸರದಿಯಲ್ಲಿದ್ದಾರೆ. ಈಗಾಗಲೇ ಮುಂಗಡ ಬುಕಿಂಗ್ ಮಾಡಿರುವ ಭಕ್ತರು ಒಂದು ವೇಳೆ ತಮ್ಮ ಪ್ರಯಾಣ ರದ್ದಾದರೆ ಅಥವಾ ಮುಂದೂಡಿಕೆಯಾದರೆ ತಮ್ಮ ಸ್ಲಾಟ್ ಕ್ಯಾನ್ಸಲ್ ಮಾಡಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ.
ನೇರವಾಗಿ ದರ್ಶನಕ್ಕೆ ಬರುವ ಭಕ್ತರು ತಮ್ಮ ಆಧಾರ್ ಕಾಡ್, ವೋಟರ್ ಐಡಿ ಅಥವಾ ಪಾಸ್ ಪೋರ್ಟ್ ಗುರುತಿನ ಚೀಟಿಯ ನಕಲು ತರಬೇಕು. ಪಂಪಾ ನದಿಯ ಬಳಿ 7 ಸಾವಿರ ಯಾತ್ರಿಕರಿಗೆ ಹಾಗೂ ನೀಲಕ್ಕಲ್ ಬಳಿ 8 ಸಾವಿರ ಯಾತ್ರಿಕರಿಗೆ ವಾಸ್ತವ್ಯದ ಅನುಕೂಲ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು