12:16 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಶಬರಿಮಲೆ ದೇವಸ್ಥಾನದ ವಾರ್ಷಿಕ ಯಾತ್ರೆ ಇಂದಿನಿಂದ ಆರಂಭ: ಪಂಪಾ ತೀರದಲ್ಲಿ ಭಕ್ತರ ದಂಡು

15/11/2024, 12:16

ತಿರುವನಂತಪುರಂ(reporterlarnataka.com): ದೇಶದ ಪ್ರಸಿದ್ದ ಯಾತ್ರಾ ಸ್ಥಳಗಳಲ್ಲೊಂದಾದ ಶಬರಿಮಲೆಯ ದೇಗುಲ ಇಂದು ತೆರೆಯಲಿದ್ದು,ಮಂಡಳ ಪೂಜೆ ಪ್ರಾರಂಭವಾಗಲಿದೆ.
ಭಕ್ತಾದಿಗಳು ಮಧ್ಯಾಹ್ನ 1.00 ಗಂಟೆಯಿಂದ ಪಂಪಾ ನದಿಯಿಂದ ಶಬರಿಮಲೆ ಯಾತ್ರೆ ಪ್ರಾರಂಭಿಸಬಹುದಾಗಿದೆ. ಆನ್‌ಲೈನ್ ಮೂಲಕ ಮುಂಗಡ ಬುಕಿಂಗ್ ಸೌಲಭ್ಯ ನೀಡಲಾಗಿದೆ. ನವೆಂಬ‌ರ್ ತಿಂಗಳ ಬುಕಿಂಗ್ ಭರ್ತಿಯಾಗಿದೆ. ಕೇವಲ ನ.30 ರ ಕೆಲವು ಸ್ಲಾಟ್ ಗಳು ಮಾತ್ರ ಲಭ್ಯವಿದೆ. ಡಿಸೆಂಬರ್ ತಿಂಗಳಲ್ಲಿ ದರ್ಶನ ಪಡೆಯಲು ಲಕ್ಷಾಂತರ ಮಂದಿ ಭಕ್ತರು ಸರದಿಯಲ್ಲಿದ್ದಾರೆ. ಈಗಾಗಲೇ ಮುಂಗಡ ಬುಕಿಂಗ್ ಮಾಡಿರುವ ಭಕ್ತರು ಒಂದು ವೇಳೆ ತಮ್ಮ ಪ್ರಯಾಣ ರದ್ದಾದರೆ ಅಥವಾ ಮುಂದೂಡಿಕೆಯಾದರೆ ತಮ್ಮ ಸ್ಲಾಟ್ ಕ್ಯಾನ್ಸಲ್ ಮಾಡಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ.
ನೇರವಾಗಿ ದರ್ಶನಕ್ಕೆ ಬರುವ ಭಕ್ತರು ತಮ್ಮ ಆಧಾರ್ ಕಾಡ್, ವೋಟರ್ ಐಡಿ ಅಥವಾ ಪಾಸ್ ಪೋರ್ಟ್ ಗುರುತಿನ ಚೀಟಿಯ ನಕಲು ತರಬೇಕು. ಪಂಪಾ ನದಿಯ ಬಳಿ 7 ಸಾವಿರ ಯಾತ್ರಿಕರಿಗೆ ಹಾಗೂ ನೀಲಕ್ಕಲ್ ಬಳಿ 8 ಸಾವಿರ ಯಾತ್ರಿಕರಿಗೆ ವಾಸ್ತವ್ಯದ ಅನುಕೂಲ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು