12:28 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಶಬರಿಮಲೆ ದೇವಸ್ಥಾನದ ವಾರ್ಷಿಕ ಯಾತ್ರೆ ಇಂದಿನಿಂದ ಆರಂಭ: ಪಂಪಾ ತೀರದಲ್ಲಿ ಭಕ್ತರ ದಂಡು

15/11/2024, 12:16

ತಿರುವನಂತಪುರಂ(reporterlarnataka.com): ದೇಶದ ಪ್ರಸಿದ್ದ ಯಾತ್ರಾ ಸ್ಥಳಗಳಲ್ಲೊಂದಾದ ಶಬರಿಮಲೆಯ ದೇಗುಲ ಇಂದು ತೆರೆಯಲಿದ್ದು,ಮಂಡಳ ಪೂಜೆ ಪ್ರಾರಂಭವಾಗಲಿದೆ.
ಭಕ್ತಾದಿಗಳು ಮಧ್ಯಾಹ್ನ 1.00 ಗಂಟೆಯಿಂದ ಪಂಪಾ ನದಿಯಿಂದ ಶಬರಿಮಲೆ ಯಾತ್ರೆ ಪ್ರಾರಂಭಿಸಬಹುದಾಗಿದೆ. ಆನ್‌ಲೈನ್ ಮೂಲಕ ಮುಂಗಡ ಬುಕಿಂಗ್ ಸೌಲಭ್ಯ ನೀಡಲಾಗಿದೆ. ನವೆಂಬ‌ರ್ ತಿಂಗಳ ಬುಕಿಂಗ್ ಭರ್ತಿಯಾಗಿದೆ. ಕೇವಲ ನ.30 ರ ಕೆಲವು ಸ್ಲಾಟ್ ಗಳು ಮಾತ್ರ ಲಭ್ಯವಿದೆ. ಡಿಸೆಂಬರ್ ತಿಂಗಳಲ್ಲಿ ದರ್ಶನ ಪಡೆಯಲು ಲಕ್ಷಾಂತರ ಮಂದಿ ಭಕ್ತರು ಸರದಿಯಲ್ಲಿದ್ದಾರೆ. ಈಗಾಗಲೇ ಮುಂಗಡ ಬುಕಿಂಗ್ ಮಾಡಿರುವ ಭಕ್ತರು ಒಂದು ವೇಳೆ ತಮ್ಮ ಪ್ರಯಾಣ ರದ್ದಾದರೆ ಅಥವಾ ಮುಂದೂಡಿಕೆಯಾದರೆ ತಮ್ಮ ಸ್ಲಾಟ್ ಕ್ಯಾನ್ಸಲ್ ಮಾಡಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ.
ನೇರವಾಗಿ ದರ್ಶನಕ್ಕೆ ಬರುವ ಭಕ್ತರು ತಮ್ಮ ಆಧಾರ್ ಕಾಡ್, ವೋಟರ್ ಐಡಿ ಅಥವಾ ಪಾಸ್ ಪೋರ್ಟ್ ಗುರುತಿನ ಚೀಟಿಯ ನಕಲು ತರಬೇಕು. ಪಂಪಾ ನದಿಯ ಬಳಿ 7 ಸಾವಿರ ಯಾತ್ರಿಕರಿಗೆ ಹಾಗೂ ನೀಲಕ್ಕಲ್ ಬಳಿ 8 ಸಾವಿರ ಯಾತ್ರಿಕರಿಗೆ ವಾಸ್ತವ್ಯದ ಅನುಕೂಲ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು