2:36 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ದುಬೈ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಅಡ್ಡೂರಿನ ಮುಹಮ್ಮದ್ ಅಹ್ನಾಫ್ ಹುಸೈನ್ ರಚಿಸಿದ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆ

15/11/2024, 12:21

ಶಾರ್ಜಾ(reporterkarnataka.com): ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ 43ನೆಯ ಆವೃತ್ತಿಯಲ್ಲಿ ದ.ಕ. ಜಿಲ್ಲೆಯ ಅಡ್ಡೂರಿನ ಪ್ರಸಕ್ತ ದುಬೈಯಲ್ಲಿ ಉದ್ಯಮಿಯಾಗಿರುವ ಅನ್ವರ್ ಹುಸೈನ್ ಮತ್ತು ಶಹನಾಝ್ ದಂಪತಿಯ ಪುತ್ರನಾದ ದುಬೈಯ ಜೆಮ್ಸ್ ಮಿಲೆನಿಯಮ್ ಶಾಲೆಯಲ್ಲಿ  ಐದನೆಯ ತರಗತಿಯಲ್ಲಿ ಕಲಿಯುತ್ತಿರುವ ಮುಹಮ್ಮದ್ ಅಹ್ನಾಫ್ ಹುಸೈನ್ ಆಂಗ್ಗ ಭಾಷೆಯಲ್ಲಿ ರಚಿಸಿದ ಕೃತಿ ಕಥಾ ಸಂಕಲನ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆಗೊಂಡಿತು. ಶಾರ್ಜಾದ ಉದ್ಯಮಿ ಪ್ರಮೋದ್ ಅವರು ಕೃತಿಯನ್ನು ಬಿಡುಗಡೆಗೊಳಿಸಿ ನೂರ್ ಅಶ್ಫಕ್ ಕಾರ್ಕಳ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೃತಿಯನ್ನು ಸ್ವೀಕರಿಸಿದ ನೂರ್ ಅಶ್ಫಕ್ ರವರು ಮಾತನಾಡಿ, ಇಂದಿನ ಯುವ ಪೀಳಿಗೆ ಸೊಶಿಯಲ್ ಮೀಡಿಯಾದಲ್ಲಿ ಮುಳುಗಿರುವಾಗ ಸಣ್ಣ ಪ್ರಾಯದ ಅಹ್ನಾಫ್ ರವರ ಪ್ರಯತ್ನ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಕೃತಿಯನ್ನು ಬರೆದ ಅಹ್ನಾಫ್ ಮಾತನಾಡುತ್ತಾ ಪುಸ್ತಕಗಳನ್ನು ಓದುವ ಹವ್ಯಾಸ ಇದ್ದುದರಿಂದ ಕೆಲವೊಂದು ಪುಸ್ತಕಗಳಿಂದ ಪ್ರೇರಣೆ ಪಡೆದು ಈ ಕೃತಿಯನ್ನು ರಚಿಸಲು ಸಾಧ್ಯವಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು