4:42 AM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ದುಬೈ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಅಡ್ಡೂರಿನ ಮುಹಮ್ಮದ್ ಅಹ್ನಾಫ್ ಹುಸೈನ್ ರಚಿಸಿದ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆ

15/11/2024, 12:21

ಶಾರ್ಜಾ(reporterkarnataka.com): ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ 43ನೆಯ ಆವೃತ್ತಿಯಲ್ಲಿ ದ.ಕ. ಜಿಲ್ಲೆಯ ಅಡ್ಡೂರಿನ ಪ್ರಸಕ್ತ ದುಬೈಯಲ್ಲಿ ಉದ್ಯಮಿಯಾಗಿರುವ ಅನ್ವರ್ ಹುಸೈನ್ ಮತ್ತು ಶಹನಾಝ್ ದಂಪತಿಯ ಪುತ್ರನಾದ ದುಬೈಯ ಜೆಮ್ಸ್ ಮಿಲೆನಿಯಮ್ ಶಾಲೆಯಲ್ಲಿ  ಐದನೆಯ ತರಗತಿಯಲ್ಲಿ ಕಲಿಯುತ್ತಿರುವ ಮುಹಮ್ಮದ್ ಅಹ್ನಾಫ್ ಹುಸೈನ್ ಆಂಗ್ಗ ಭಾಷೆಯಲ್ಲಿ ರಚಿಸಿದ ಕೃತಿ ಕಥಾ ಸಂಕಲನ “ದಿ ಹೀರೋಯಿಕ್ ಟೇಲ್ಸ್ ಆಫ್ ಅನ್ನಾ ಎಂಡ್ ಸಾರ” ಬಿಡುಗಡೆಗೊಂಡಿತು. ಶಾರ್ಜಾದ ಉದ್ಯಮಿ ಪ್ರಮೋದ್ ಅವರು ಕೃತಿಯನ್ನು ಬಿಡುಗಡೆಗೊಳಿಸಿ ನೂರ್ ಅಶ್ಫಕ್ ಕಾರ್ಕಳ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೃತಿಯನ್ನು ಸ್ವೀಕರಿಸಿದ ನೂರ್ ಅಶ್ಫಕ್ ರವರು ಮಾತನಾಡಿ, ಇಂದಿನ ಯುವ ಪೀಳಿಗೆ ಸೊಶಿಯಲ್ ಮೀಡಿಯಾದಲ್ಲಿ ಮುಳುಗಿರುವಾಗ ಸಣ್ಣ ಪ್ರಾಯದ ಅಹ್ನಾಫ್ ರವರ ಪ್ರಯತ್ನ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಕೃತಿಯನ್ನು ಬರೆದ ಅಹ್ನಾಫ್ ಮಾತನಾಡುತ್ತಾ ಪುಸ್ತಕಗಳನ್ನು ಓದುವ ಹವ್ಯಾಸ ಇದ್ದುದರಿಂದ ಕೆಲವೊಂದು ಪುಸ್ತಕಗಳಿಂದ ಪ್ರೇರಣೆ ಪಡೆದು ಈ ಕೃತಿಯನ್ನು ರಚಿಸಲು ಸಾಧ್ಯವಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು