3:48 AM Tuesday11 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ: ನ. 17ರಂದು ಚಿಕ್ಕಜಾತ್ರಾ ಮಹೋತ್ಸವ, 19ರಂದು ತೆಪ್ಪೋತ್ಸವ

15/11/2024, 21:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಇದೇ ನವೆಂಬರ್ 17ರಂದು ಚಿಕ್ಕಜಾತ್ರಾ ಮಹೋತ್ಸವ ನಡೆಯಲಿದೆ .


ಜಾತ್ರೆ ಪ್ರಯುಕ್ತ ನವೆಂಬರ್ 14ರಂದು ಶ್ರೀಕಂಠಮುಡಿ ಉತ್ಸವ 17ರಂದು ಬೆಳಿಗ್ಗೆ 10. 45ರಿಂದ 11:30 ಗಂಟೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಕ್ಷೇತ್ರಾಧಿಪತಿ ಶ್ರೀ ನಂಜುಂಡೇಶ್ವರರ ರಥಾರೋಹಣ ಹಾಗೂ 19 ರಂದು ರಾತ್ರಿ 7.00 ಗಂಟೆಗೆ ಕಪಿಲಾ ನದಿಯಲ್ಲಿ ತೆಪ್ಪೋತ್ಸವವು ಸೇರಿದಂತೆ ಎಲ್ಲಾ ಧಾರ್ಮಿಕ ಕಾರ್ಯಗಳು ದೇವಾಲಯದ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರ ಆಚಾರ್ಯತ್ವದಲ್ಲಿ ನಡೆಯಲಿದೆ. ಚಿಕ್ಕ ಜಾತ್ರೆಯ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತ ಮಹಾಶಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಕೃಪೆಗೆ ಪಾತ್ರರಾಗಬೇಕಾಗಿ ನಂಜನಗೂಡು
ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಎಂ,ಆಡಳಿತಾಧಿಕಾರಿ ಹಾಗೂ ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಹಾಗೂ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ. ವಿನಂತಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು