2:21 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್‌ ರಸ್ತೆಗೆ 343.74 ಕೋಟಿ ಬಿಡುಗಡೆ: ಅಭಿವೃದ್ಧಿ ಹೆಸರಿನಲ್ಲಿ 10 ವರ್ಷ ರಸ್ತೆ ಮುಚ್ಚುವ ಹುನ್ನಾರ?; ಚರ್ಚೆ ಆರಂಭ

15/11/2024, 22:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಒಕ್ಕೂಟ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವ ಹೇಳಿಕೆ ಬೆನ್ನಲ್ಲೇ ಗಂಭೀರ ಚರ್ಚೆಗಳು ಆರಂಭವಾಗಿವೆ.

ಹಣ ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಂಗಳೂರಿನಿಂದ ಮೂಡಿಗೆರೆ – ತುಮಕೂರಿಗೆ ಸಂಪರ್ಕಿಸುವ ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ.ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ ಎಂದಿದ್ದಾರೆ.
ರಾಜ್ಯದ ಪ್ರಮುಖ ಹೆದ್ದಾರಿ ಚಾರ್ಮಾಡಿ ಘಾಟ್‌ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲದ ಜೊತೆಗೆ ಸುಗಮ ಸರಕು ಸಾಗಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ಕೂಡ ವೃದ್ಧಿಸಲಿದೆ ಎನ್ನುವುದು ಸಂಸದರ ಅಭಿಪ್ರಾಯ.
ಮತ್ತೊಂದು ದುರಂತ ? :ಚಾರ್ಮಾಡಿ ರಸ್ತೆಗೆ ಅಭಿವೃದ್ಧಿಗೆ ಹಣ ಬಿಡುಗಡೆ ಆಗಿರುವುದು ಸಂತೋಷ, ಆದರೆ ಸರಿಯಾದ ಕ್ರಿಯಾ ಯೋಜನೆ ಇಲ್ಲದೆ ರಸ್ತೆ ಮಾಡಲು ಹೊರಟಿರೋದು ಮತ್ತೊಂದು ಶಿರಾಡಿ ಘಾಟ್ ದುರಂತ ಆಗುವುದಿಲ್ಲವೇ ಎನ್ನುವ ಪ್ರಶ್ನೆ ಎದುರಾಗಿದೆ.
ಡಬಲ್ ರೋಡ್ ಮಾಡಲು ಜಾಗಾನೇ ಇಲ್ಲ ,ಸ್ವಲ್ಪ ಜಾಸ್ತಿ ಹಣ ಆದರೂ ಪರವಾಗಿಲ್ಲ ಉತ್ತಮವಾದ ಸುರಂಗ ಮಾರ್ಗನೋ ಅಥವಾ ಫ್ಲೈ ಓವರ್ ರೀತಿಯ ಕ್ರಿಯಾ ಯೋಜನೆ ಮಾಡಿ, ಆಗು ಹೋಗುಗಳ ಬಗ್ಗೆ ಚರ್ಚಿಸಿ ಮತ್ತಷ್ಟು ಹಣ ಸೇರಿಸಿ ಉತ್ತಮವಾದ ರಸ್ತೆ ನಿರ್ಮಿಸಿ ಎನ್ನುವ ಸಲಹೆ ಚಾರ್ಮಾಡಿ ರಸ್ತೆ ಉಳಿಸಿ ಹೋರಾಟ ಸಮಿತಿ ಸಂಚಾಲಕ ಸಂಜಯ್ ಕೊಟ್ಟಿಗೆಹಾರ ರವರದು.
ಅಭಿವೃದ್ಧಿಯ ಹೆಸರಲ್ಲಿ ಸುಮಾರು 10 ವರ್ಷಗಳ ಕಾಲ ರಸ್ತೆ ಮುಚ್ಚುವ ಹುನ್ನಾರ ನಡೆದಿದೆ, 3 ವಿಭಾಗದ ಟೆಂಡರ್ ಆಗಿದ್ದು ಒಂದು ವಿಭಾಗದ ರಸ್ತೆ ಮಾಡಲು 5 ವರ್ಷ ಬೇಕು, ಹೀಗಾದರೆ ಕೊಟ್ಟಿಗೆಹಾರ ಹತ್ತು ವರ್ಷಗಳಲ್ಲಿ ನಿರ್ನಾಮವಾಗಲಿದೆ ಎನ್ನುವ ಆತಂಕ ಹೊರ ಹಾಕಿ ನಮಗೇನು ಡಬಲ್ ರಸ್ತೆ ಬೇಕಾಗಿಲ್ಲ,ಗುಂಡಿ ಮುಚ್ಚಿದರೆ ಸಾಕು ಎಂದಿದ್ದಾರೆ.
ಡಬಲ್ ರಸ್ತೆ ಹೆಸರಿನಲ್ಲಿ ವಿದ್ಯಾರ್ಥಿಗಳ ಹಾಗೂ ನಾವು ನಂಬಿರುವ ದಕ್ಷಿಣ ಕನ್ನಡ ಆಸ್ಪತ್ರೆಗೆ ಹೋಗಲು ಬಹಳ ತೊಂದರೆ ಆಗಲಿದೆ , ಎಲ್ಲರೂ ಕೈ ಜೋಡಿಸಿದರೆ ಒಂದು ದೊಡ್ಡ ಮಟ್ಟದ ಹೋರಾಟ ಮಾಡೋಣ ಎಂದು ಕೆಲವರು ಪ್ರತಿಕ್ರಿಯಿಸಿದ್ದು ಹೋರಾಟದ ರೂಪುರೇಷೆ ನಿರ್ಧರಿಸಲು ಸಭೆಯನ್ನು ಕರೆಯಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು