12:13 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಮಹಿಳೆಯರೇ ಪ್ರಯಾಣಿಸುತ್ತಿದ್ದ ಟಿಟಿ ವಾಹನ ಪಲ್ಟಿ: 6ಕ್ಕೂ ಹೆಚ್ಚು ಮಂದಿಗೆ ಗಾಯ; ಕೊಲ್ಲೂರಿನಿಂದ ವಾಪಸಾಗುತ್ತಿದ್ದಾಗ ದುರ್ಘಟನೆ

16/11/2024, 11:15

ಹೊಸನಗರ(reporterkarnataka.com): ರಾಣೇಬೆನ್ನೂರು- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಚಿಕ್ಕಪೇಟೆ ಸರ್ಕಲ್ ಸಮೀಪದ ಶ್ರೀಧರಪುರ ಬಳಿ ಕೊಲ್ಲೂರಿನಿಂದ ವಾಪಸಾಗುತ್ತಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯೊಡೆದ ಪರಿಣಾಮ 6 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ.
ಡಜನಿಗೂ ಹೆಚ್ಚು ಮಹಿಳೆಯರೇ ತುಂಬಿದ್ದ ಟಿಟಿ ವಾಹನ ಕೊಲ್ಲೂರು ಹೆದ್ದಾರಿಯಲ್ಲಿ‌ ಶುಕ್ರವಾರ ರಾತ್ರಿ11 ರ ವೇಳೆಗೆಅಪಘಾತಕ್ಕೀಡಾಗಿತ್ತು.
ಅಪಘಾತದಲ್ಲಿ ಸರಸ್ವತಿ, ಸರೋಜಾ,ಕಮಲಾ, ಜ್ಯೋತಿ, ಗೌರಮ್ಮ, ಶಾರದಾ ಸೇರಿದಂತೆ 6ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದಾರೆ. ಹೊಸನಗರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ ಬಳಿಕ ಮೂರು ಮಹಿಳೆಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರೆಲ್ಲ ಶಿಕಾರಿಪುರ ತಾಲೂಕಿನ ಬಿ ಅಣ್ಣಾಪುರ ಗ್ರಾಮದವರಾಗಿದ್ದಾರೆ.
ಕೊಲ್ಲೂರು ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಟಿಟಿ ವಾಹನ ರಸ್ತೆ‌ ಮೇಲೆ ಪಲ್ಟಿ ಹೊಡೆದ ಪರಿಣಾಮ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು