7:45 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಹಿಳೆಯರೇ ಪ್ರಯಾಣಿಸುತ್ತಿದ್ದ ಟಿಟಿ ವಾಹನ ಪಲ್ಟಿ: 6ಕ್ಕೂ ಹೆಚ್ಚು ಮಂದಿಗೆ ಗಾಯ; ಕೊಲ್ಲೂರಿನಿಂದ ವಾಪಸಾಗುತ್ತಿದ್ದಾಗ ದುರ್ಘಟನೆ

16/11/2024, 11:15

ಹೊಸನಗರ(reporterkarnataka.com): ರಾಣೇಬೆನ್ನೂರು- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಚಿಕ್ಕಪೇಟೆ ಸರ್ಕಲ್ ಸಮೀಪದ ಶ್ರೀಧರಪುರ ಬಳಿ ಕೊಲ್ಲೂರಿನಿಂದ ವಾಪಸಾಗುತ್ತಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯೊಡೆದ ಪರಿಣಾಮ 6 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ.
ಡಜನಿಗೂ ಹೆಚ್ಚು ಮಹಿಳೆಯರೇ ತುಂಬಿದ್ದ ಟಿಟಿ ವಾಹನ ಕೊಲ್ಲೂರು ಹೆದ್ದಾರಿಯಲ್ಲಿ‌ ಶುಕ್ರವಾರ ರಾತ್ರಿ11 ರ ವೇಳೆಗೆಅಪಘಾತಕ್ಕೀಡಾಗಿತ್ತು.
ಅಪಘಾತದಲ್ಲಿ ಸರಸ್ವತಿ, ಸರೋಜಾ,ಕಮಲಾ, ಜ್ಯೋತಿ, ಗೌರಮ್ಮ, ಶಾರದಾ ಸೇರಿದಂತೆ 6ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದಾರೆ. ಹೊಸನಗರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ ಬಳಿಕ ಮೂರು ಮಹಿಳೆಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರೆಲ್ಲ ಶಿಕಾರಿಪುರ ತಾಲೂಕಿನ ಬಿ ಅಣ್ಣಾಪುರ ಗ್ರಾಮದವರಾಗಿದ್ದಾರೆ.
ಕೊಲ್ಲೂರು ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಟಿಟಿ ವಾಹನ ರಸ್ತೆ‌ ಮೇಲೆ ಪಲ್ಟಿ ಹೊಡೆದ ಪರಿಣಾಮ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು