7:32 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಮಕ್ಕಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಬೇಕು: ಮುರಿಗೆಣ್ಣ ದೇಸಾಯಿ

16/11/2024, 12:20

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವ ಕೆಲಸ ಶಾಲೆ ಮತ್ತು ಮನೆಗಳಲ್ಲಿ ಆಗಬೇಕಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳಸಬೇಕು. ಅವರು ನಮ್ಮ ದೇಶದ ಆಸ್ತಿ ಎಂದು ಮುರಿಗೆಣ್ಣ ದೇಸಾಯಿ ಹೇಳಿದರು.
ಪಟ್ಟಣದ ಸ್ಪಂದನ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಜವಾಹ‌ರ್ ಲಾಲ್ ನೆಹರು ಅವರ ಜಯಂತಿಯ ಅಂಗವಾಗಿ ಅವರ ಭಾವಚಿತಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮಕ್ಕಳ ದಿನಾಚರಣೆ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಪ್ರತಿಯೊಬ್ಬರು ದೇಶದ ಅಭಿವೃದ್ಧಿಯ ಚಿಂತನೆಯನ್ನು ಮಾಡಬೇಕು. ಭವ್ಯ ಭಾರತದ ನಿರ್ಮಾಣಕ್ಕಾಗಿ ಚಿಕ್ಕ ವಯಸ್ಸಿನಲ್ಲಿಯೆ ಮಕ್ಕಳಿಗೆ ದೇಶ ಪ್ರೇಮವನ್ನು ಬೆಳೆಸುವ ಕಾರ್ಯ ಶಿಕ್ಷಕರು ಹಾಗೂ ಪಾಲಕರಿಂದ ಆಗಬೇಕಾಗಿದೆ ಎಂದು ಹೇಳಿದರು.
ಶಾಲಾ ಹಿರಿಯ ಶಿಕ್ಷಕ ರಾಮಣ್ಣ ಹುಗಾರ ಮಾತನಾಡಿ,
ದೇಶ ಕಂಡ ಮಹಾನ್ ವ್ಯಕ್ತಿ ಜವಾಹರಲಾಲ ನೆಹರು. ಅವರು ದೇಶದ ಅಭಿವೃದ್ಧಿಗೆ ತಮ್ಮದೆ ಆದ ಸೇವೆಯನ್ನು ಸಲ್ಲಿಸಿದ್ದಾರೆ. ಮಕ್ಕಳನ್ನು ದೇವರ ರೂಪದಲ್ಲಿ ಕಾಣುತ್ತಿದ್ದರು. ಮಕ್ಕಳ ಮೇಲಿದ್ದ ಅತಿಯಾದ ಪ್ರೀತಿಯಿಂದಾಗಿ ಇಂದು ದೇಶಾದ್ಯಾಂತ ಅವರ ಹುಟ್ಟುಹಬ್ಬವನ್ನು ಮಕ್ಕಳ ದಿನಚಾರಣೆ ಎಂದು ಆಚರಣೆ ಮಾಡುತ್ತಿವೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ, ಸಮಾಜ ಸುಧಾರಕರ, ವಚನಕಾರರು, ಮಹಾನ್ ಸಾಧಕರ ಛದ್ಮವೇಷವನ್ನು ತೊಟ್ಟು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಎಲ್ಲಾ ಮಕ್ಕಳಿಗೆ ನೋಟಬುಕ್ಸ್ ಹಾಗೂ ಪೆನ್ನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಸುಭಾಸ ಪವಾರ, ಶಾರದಾದೇವಿ, ಪ್ರಮೀಳಾ ನೂಲಿನ್, ವರಸಂದ್ಯಾ, ಆಸ್ಮಾ, ಜಯಶ್ರೀ, ಪ್ರಿಯಾಂಕಾ, ಸಂಧ್ಯಾ, ಗೌಸಿಯಾ ಬಾನು, ಪ್ರೇಮಾ ಹಾಗೂ ವಿದ್ಯಾರ್ಥಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು